Homeಮುಖಪುಟವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ 'ಅಂಬೇಡ್ಕರ್' ಪ್ರತಿಮೆ ಅನಾವರಣ

ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

- Advertisement -
- Advertisement -

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಅನಾವರಣಗೊಳಿಸಿದ್ದಾರೆ.

ವಿಜಯವಾಡದ ಬಂದರ್ ರಸ್ತೆಯಲ್ಲಿರುವ ಸ್ವರಾಜ್ ಮೈದಾನದಲ್ಲಿ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಹೆಸರಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅನಾವರಣ ಮಾಡಿದ್ದಾರೆ. ಪ್ರತಿಮೆ ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಜಗನ್‌ ಮೋಹನ್‌ ರೆಡ್ಡಿ, ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವಿಗ್ರಹದ ಎತ್ತರವು 125 ಅಡಿ ಇದ್ದು, 85 ಅಡಿ ಇರುವ ಮೂರ್ತಿ ಪೀಠವನ್ನು ಸೇರಿಸಿದರೆ, ಪ್ರತಿಮೆಯ ಒಟ್ಟಾರೆ ಎತ್ತರವು 206 ಅಡಿಯಾಗಿದೆ. ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯ ಸುತ್ತ ಅನುಭವ ಕೇಂದ್ರ, 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ, ಮಕ್ಕಳ ಆಟದ ಆವರಣ, ಕೊಳಗಳು, ಸಂಗೀತ ಕಾರಂಜಿ ಹಾಗೂ ಕಾಲ್ನಡಿಗೆಯ ದಾರಿಯಂತಹ ನಾಗರಿಕ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಹಿಂದೆ ಸ್ವರಾಜ್‌ ಮೈದಾನ ಎಂದು ಕರೆಯಲ್ಪಡುತ್ತಿದ್ದ ಮೈದಾನ ಈಗ ಅಧಿಕೃತವಾಗಿ ಡಾ.ಬಿ.ಆರ್. ಅಂಬೇಡ್ಕರ್ ಸ್ವರಾಜ್ ಮೈದಾನವಾಗಿದೆ. ಇಂದಿನಿಂದ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದೆ.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಇದು ಭಾರತೀಯ ಸಂವಿಧಾನದ ಶಿಲ್ಪಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರತಿಮೆಯು ಭಾರತದಲ್ಲಿನ ಅತಿ ಎತ್ತರದ ಧಾರ್ಮಿಕವಲ್ಲದ ಪ್ರತಿಮೆಯಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ವರದಿ ಮಾಡಿದಂತೆ ಇದು ಭಾರತದಲ್ಲೇ ತಯಾರಿಸಿದ ಪ್ರತಿಮೆ ಆಗಿದೆ. ಆಂಧ್ರ ಪ್ರದೇಶ ಸರ್ಕಾರವು ಈ ಪ್ರತಿಮೆ ವೀಕ್ಷಣೆಗೆ ಅವಕಾಶವನ್ನು ಇಂದಿನಿಂದ ಕಲ್ಪಿಸಿದೆ.

ಈ ಯೋಜನೆಯನ್ನು ನೊಯ್ಡಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗೆ ವಹಿಸಲಾಗಿತ್ತು. ಅನುಭವ ಕೇಂದ್ರವು ಕಾಲಚಕ್ರ ಮಹಾ ಮಂಟಪದ ಕಟ್ಟಡದಲ್ಲಿದೆ. ಇದು ಡಾ. ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೀತಿಗಳ ಬಗ್ಗೆ ಸ್ಫೂರ್ತಿ ನೀಡುತ್ತದೆ. ಗ್ರಂಥಾಲಯವನ್ನು ಕೂಡ ಅಲ್ಲಿ ನಿರ್ಮಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಸಿದ್ಧಪಡಿಸಲಾಗಿದ್ದು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಇರುತ್ತದೆ.

ಈ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ಪ್ರತಿಮೆ ಸ್ಥಾಪನೆ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರವು ವಿಜಯವಾಡದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ 206 ಅಡಿ ಮಹಾಶಿಲ್ಪವು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಕೂಡ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಈ ಪ್ರತಿಷ್ಠಿತ ಯೋಜನೆಯನ್ನು 2020ರಲ್ಲಿ 268 ಕೋಟಿಗಳ ಅಂದಾಜು ಬಜೆಟ್‌ನೊಂದಿಗೆ ಪ್ರಾರಂಭಿಸಿತು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಜೂನ್ 2020ರಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

 

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...