Homeಮುಖಪುಟವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ 'ಅಂಬೇಡ್ಕರ್' ಪ್ರತಿಮೆ ಅನಾವರಣ

ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

- Advertisement -
- Advertisement -

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಅನಾವರಣಗೊಳಿಸಿದ್ದಾರೆ.

ವಿಜಯವಾಡದ ಬಂದರ್ ರಸ್ತೆಯಲ್ಲಿರುವ ಸ್ವರಾಜ್ ಮೈದಾನದಲ್ಲಿ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಹೆಸರಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅನಾವರಣ ಮಾಡಿದ್ದಾರೆ. ಪ್ರತಿಮೆ ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಜಗನ್‌ ಮೋಹನ್‌ ರೆಡ್ಡಿ, ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವಿಗ್ರಹದ ಎತ್ತರವು 125 ಅಡಿ ಇದ್ದು, 85 ಅಡಿ ಇರುವ ಮೂರ್ತಿ ಪೀಠವನ್ನು ಸೇರಿಸಿದರೆ, ಪ್ರತಿಮೆಯ ಒಟ್ಟಾರೆ ಎತ್ತರವು 206 ಅಡಿಯಾಗಿದೆ. ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯ ಸುತ್ತ ಅನುಭವ ಕೇಂದ್ರ, 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ, ಮಕ್ಕಳ ಆಟದ ಆವರಣ, ಕೊಳಗಳು, ಸಂಗೀತ ಕಾರಂಜಿ ಹಾಗೂ ಕಾಲ್ನಡಿಗೆಯ ದಾರಿಯಂತಹ ನಾಗರಿಕ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಹಿಂದೆ ಸ್ವರಾಜ್‌ ಮೈದಾನ ಎಂದು ಕರೆಯಲ್ಪಡುತ್ತಿದ್ದ ಮೈದಾನ ಈಗ ಅಧಿಕೃತವಾಗಿ ಡಾ.ಬಿ.ಆರ್. ಅಂಬೇಡ್ಕರ್ ಸ್ವರಾಜ್ ಮೈದಾನವಾಗಿದೆ. ಇಂದಿನಿಂದ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದೆ.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಇದು ಭಾರತೀಯ ಸಂವಿಧಾನದ ಶಿಲ್ಪಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರತಿಮೆಯು ಭಾರತದಲ್ಲಿನ ಅತಿ ಎತ್ತರದ ಧಾರ್ಮಿಕವಲ್ಲದ ಪ್ರತಿಮೆಯಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ವರದಿ ಮಾಡಿದಂತೆ ಇದು ಭಾರತದಲ್ಲೇ ತಯಾರಿಸಿದ ಪ್ರತಿಮೆ ಆಗಿದೆ. ಆಂಧ್ರ ಪ್ರದೇಶ ಸರ್ಕಾರವು ಈ ಪ್ರತಿಮೆ ವೀಕ್ಷಣೆಗೆ ಅವಕಾಶವನ್ನು ಇಂದಿನಿಂದ ಕಲ್ಪಿಸಿದೆ.

ಈ ಯೋಜನೆಯನ್ನು ನೊಯ್ಡಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗೆ ವಹಿಸಲಾಗಿತ್ತು. ಅನುಭವ ಕೇಂದ್ರವು ಕಾಲಚಕ್ರ ಮಹಾ ಮಂಟಪದ ಕಟ್ಟಡದಲ್ಲಿದೆ. ಇದು ಡಾ. ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೀತಿಗಳ ಬಗ್ಗೆ ಸ್ಫೂರ್ತಿ ನೀಡುತ್ತದೆ. ಗ್ರಂಥಾಲಯವನ್ನು ಕೂಡ ಅಲ್ಲಿ ನಿರ್ಮಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಸಿದ್ಧಪಡಿಸಲಾಗಿದ್ದು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಇರುತ್ತದೆ.

ಈ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ಪ್ರತಿಮೆ ಸ್ಥಾಪನೆ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರವು ವಿಜಯವಾಡದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ 206 ಅಡಿ ಮಹಾಶಿಲ್ಪವು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಕೂಡ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಈ ಪ್ರತಿಷ್ಠಿತ ಯೋಜನೆಯನ್ನು 2020ರಲ್ಲಿ 268 ಕೋಟಿಗಳ ಅಂದಾಜು ಬಜೆಟ್‌ನೊಂದಿಗೆ ಪ್ರಾರಂಭಿಸಿತು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಜೂನ್ 2020ರಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

 

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...