Homeಮುಖಪುಟವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ 'ಅಂಬೇಡ್ಕರ್' ಪ್ರತಿಮೆ ಅನಾವರಣ

ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

- Advertisement -
- Advertisement -

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಅನಾವರಣಗೊಳಿಸಿದ್ದಾರೆ.

ವಿಜಯವಾಡದ ಬಂದರ್ ರಸ್ತೆಯಲ್ಲಿರುವ ಸ್ವರಾಜ್ ಮೈದಾನದಲ್ಲಿ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಹೆಸರಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅನಾವರಣ ಮಾಡಿದ್ದಾರೆ. ಪ್ರತಿಮೆ ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಜಗನ್‌ ಮೋಹನ್‌ ರೆಡ್ಡಿ, ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವಿಗ್ರಹದ ಎತ್ತರವು 125 ಅಡಿ ಇದ್ದು, 85 ಅಡಿ ಇರುವ ಮೂರ್ತಿ ಪೀಠವನ್ನು ಸೇರಿಸಿದರೆ, ಪ್ರತಿಮೆಯ ಒಟ್ಟಾರೆ ಎತ್ತರವು 206 ಅಡಿಯಾಗಿದೆ. ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯ ಸುತ್ತ ಅನುಭವ ಕೇಂದ್ರ, 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ, ಮಕ್ಕಳ ಆಟದ ಆವರಣ, ಕೊಳಗಳು, ಸಂಗೀತ ಕಾರಂಜಿ ಹಾಗೂ ಕಾಲ್ನಡಿಗೆಯ ದಾರಿಯಂತಹ ನಾಗರಿಕ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಹಿಂದೆ ಸ್ವರಾಜ್‌ ಮೈದಾನ ಎಂದು ಕರೆಯಲ್ಪಡುತ್ತಿದ್ದ ಮೈದಾನ ಈಗ ಅಧಿಕೃತವಾಗಿ ಡಾ.ಬಿ.ಆರ್. ಅಂಬೇಡ್ಕರ್ ಸ್ವರಾಜ್ ಮೈದಾನವಾಗಿದೆ. ಇಂದಿನಿಂದ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದೆ.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಇದು ಭಾರತೀಯ ಸಂವಿಧಾನದ ಶಿಲ್ಪಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರತಿಮೆಯು ಭಾರತದಲ್ಲಿನ ಅತಿ ಎತ್ತರದ ಧಾರ್ಮಿಕವಲ್ಲದ ಪ್ರತಿಮೆಯಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ವರದಿ ಮಾಡಿದಂತೆ ಇದು ಭಾರತದಲ್ಲೇ ತಯಾರಿಸಿದ ಪ್ರತಿಮೆ ಆಗಿದೆ. ಆಂಧ್ರ ಪ್ರದೇಶ ಸರ್ಕಾರವು ಈ ಪ್ರತಿಮೆ ವೀಕ್ಷಣೆಗೆ ಅವಕಾಶವನ್ನು ಇಂದಿನಿಂದ ಕಲ್ಪಿಸಿದೆ.

ಈ ಯೋಜನೆಯನ್ನು ನೊಯ್ಡಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗೆ ವಹಿಸಲಾಗಿತ್ತು. ಅನುಭವ ಕೇಂದ್ರವು ಕಾಲಚಕ್ರ ಮಹಾ ಮಂಟಪದ ಕಟ್ಟಡದಲ್ಲಿದೆ. ಇದು ಡಾ. ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೀತಿಗಳ ಬಗ್ಗೆ ಸ್ಫೂರ್ತಿ ನೀಡುತ್ತದೆ. ಗ್ರಂಥಾಲಯವನ್ನು ಕೂಡ ಅಲ್ಲಿ ನಿರ್ಮಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಸಿದ್ಧಪಡಿಸಲಾಗಿದ್ದು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಇರುತ್ತದೆ.

ಈ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ಪ್ರತಿಮೆ ಸ್ಥಾಪನೆ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರವು ವಿಜಯವಾಡದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ 206 ಅಡಿ ಮಹಾಶಿಲ್ಪವು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಕೂಡ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಈ ಪ್ರತಿಷ್ಠಿತ ಯೋಜನೆಯನ್ನು 2020ರಲ್ಲಿ 268 ಕೋಟಿಗಳ ಅಂದಾಜು ಬಜೆಟ್‌ನೊಂದಿಗೆ ಪ್ರಾರಂಭಿಸಿತು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಜೂನ್ 2020ರಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

 

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...