Homeಮುಖಪುಟಸೋನಿಯಾ ಗಾಂಧಿ ಬಗ್ಗೆ ಸುಳ್ಳು ಆರೋಪ: ಆಂಧ್ರ ಡಿಸಿಎಂ ವಿರುದ್ಧ ಪ್ರಕರಣ ದಾಖಲು

ಸೋನಿಯಾ ಗಾಂಧಿ ಬಗ್ಗೆ ಸುಳ್ಳು ಆರೋಪ: ಆಂಧ್ರ ಡಿಸಿಎಂ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಸುಳ್ಳು ಆಪಾದನೆಯ ಹೇಳಿಕೆ ನೀಡಿದ್ದಾರೆಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತೆಲಂಗಾಣ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮಲ್ಲು ರವಿ ಅವರ ದೂರಿನ ಮೇರೆಗೆ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲು ರವಿ ಅವರು ತಮ್ಮ ದೂರಿನಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ನಮ್ಮ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಹೆಲಿಕಾಪ್ಟರ್ ಅಪಘಾತದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ (ವೈಎಸ್ಆರ್) ಅವರ ಸಾವಿಗೆ ಸೋನಿಯಾ ಗಾಂಧಿ ಸಂಬಂಧ ಕಲ್ಪಿಸಿ ನಾರಾಯಣ ಸ್ವಾಮಿ ಕೆಲವು ಕಾಮೆಂಟ್‌ಗಳನ್ನು ಮಾಡಿದ್ದರು.

ಮಲ್ಲು ರವಿ ದೂರಿನ ನಂತರ ನಾರಾಯಣ ಸ್ವಾಮಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದರು. ವೈಎಸ್ಆರ್ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಗೆ ಮಾತ್ರವಲ್ಲದೆ ಇಡೀ ಆಂಧ್ರಪ್ರದೇಶದ ಜನತೆಗೆ ಅನುಮಾನವಿದೆ. ವೈಎಸ್ಆರ್ ಸಾವಿನ ಹಿಂದೆ ಟಿಡಿಪಿ ಅಧ್ಯಕ್ಷರು ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಸೋನಿಯಾ ಗಾಂಧಿ ಅವರು ಇದ್ದಾರೆ ಎಂದು ಅವರು ಹೇಳಿಕೆ ನೀಡಿದ್ದರು.

ನಾರಾಯಣ ಸ್ವಾಮಿ ಅವರ ಹೇಳಿಕೆಯ ವೀಡಿಯೊ ತುಣುಕನ್ನು ವಿಶ್ಲೇಷಿಸಿದ ನಂತರ ಪೊಲೀಸರು ಜನವರಿ 12 ರಂದು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ತಂದೆ ವೈಎಸ್‌ ರಾಜಶೇಖರ್‌ ರೆಡ್ಡಿ ಅವರು ಸೆಪ್ಟೆಂಬರ್ 2, 2009ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಆಗಿನ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ವೈಎಸ್‌ಆರ್ ಅವರಿದ್ದ ಹೆಲಿಕ್ಯಾಪ್ಟರ್ ಕರ್ನೂಲ್ ಜಿಲ್ಲೆಯ ನಲ್ಲಮಲ್ಲ ದಟ್ಟ ಅರಣ್ಯದಲ್ಲಿ ಕಣ್ಮರೆಯಾಗಿತ್ತು. ಸಿಎಂ ಹೆಲಿಕ್ಯಾಪ್ಟರ್ ಕಣ್ಮರೆಯಾಗುತ್ತಿದ್ದಂತೆಯೇ ಹುಡುಕಾಟ ನಡೆಸಲಾಗಿತ್ತು. ಬಳಿಕ ರುದ್ರಕೋಡೋರು ಎಂಬಲ್ಲಿ ಹೆಲಿಕ್ಯಾಪ್ಟರ್ ಪತ್ತೆಯಾಗಿತ್ತು. ಹೆಲಿಕಾಪ್ಟರ್‌ ದುರಂತದಲ್ಲಿ ವೈಎಸ್ ರಾಜಶೇಖರ್ ರೆಡ್ಡಿ ಮೃತಪಟ್ಟಿದ್ದರು.

ಈ ಹಿಂದೆ ತಮ್ಮ ತಂದೆಯ ಸಾವಿನಲ್ಲಿ ಟಿಡಿಪಿ ನಾಯಕ ಸಿಎಂ ಚಂದ್ರಬಾಬು ನಾಯ್ಡು ಪಾತ್ರವಿದೆ ಎಂದು ವೈಎಸ್‌ಆರ್ ಪುತ್ರಿ ಶರ್ಮಿಳಾ ಅವರು ಆರೋಪಿಸಿದ್ದರು. ಶರ್ಮಿಳಾ ಅವರು ಇತ್ತೀಚೆಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿ: ‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...