Homeಮುಖಪುಟಹುತಾತ್ಮ ಯೋಧ ಮುರಳಿ ನಾಯಕ್ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ ಭೂಮಿ-ಉದ್ಯೋಗ

ಹುತಾತ್ಮ ಯೋಧ ಮುರಳಿ ನಾಯಕ್ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ ಭೂಮಿ-ಉದ್ಯೋಗ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕರ್ತವ್ಯದ ವೇಳೆ ಹುತಾತ್ಮರಾದ ಅಗ್ನಿವೀರ್ ಮುಧಾವತ್ ಮುರಳಿ ನಾಯಕ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ಐದು ಎಕರೆ ಭೂಮಿ ನೀಡುವುದಾಗಿ ಆಂಧ್ರಪ್ರದೇಶದ ಶಿಕ್ಷಣ ಮತ್ತು ಐಟಿ ಸಚಿವ ನಾರಾ ಲೋಕೇಶ್ ಘೋಷಿಸಿದ್ದಾರೆ.

ಅಗ್ನಿವೀರ್ ಮುರಳಿ ನಾಯಕ್ ಅವರ ಮೃತದೇಹ ಶುಕ್ರವಾರ ಬೆಂಗಳೂರಿನಿಂದ ಆಂಧ್ರಪ್ರದೇಶದ ಅವರ ಹುಟ್ಟೂರು ಕಲ್ಲಿತಾಂಡಕ್ಕೆ ಆಗಮಿಸಿದ್ದು, ದುಃಖ ಮತ್ತು ಗೌರವದ ಮಹಾಪೂರವನ್ನೇ ಹರಿಸಿದೆ.

ಪಾಕಿಸ್ತಾನದಿಂದ ಭಾರೀ ಶೆಲ್ ದಾಳಿಯ ಸಮಯದಲ್ಲಿ ಗಾಯಗೊಂಡಿದ್ದ 23 ವರ್ಷದ ಅಗ್ನಿವೀರ್ ನಾಯಕ್ ಸಾವನ್ನಪ್ಪಿದ್ದಾರೆ. ಗಡಿಯ ಮೀಸಲು ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಶುಕ್ರವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಿಧನರಾದರು.

 

ಸಚಿವ ನಾರಾ ಲೋಕೇಶ್ ಅವರು ನಾಯಕ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಭಾನುವಾರ ದುಃಖಿತ ಕುಟುಂಬವನ್ನು ಭೇಟಿ ಮಾಡಿ ಸರ್ಕಾರದ ಬೆಂಬಲ ಹಾಗೂ ಭರವಸೆ ನೀಡಿದರು. “ಮುರಳಿ ನಾಯಕ್ ಅವರ ಶೌರ್ಯಕ್ಕೆ ರಾಜ್ಯವು ನಮಿಸುತ್ತದೆ. ರಾಷ್ಟ್ರಕ್ಕೆ ಅವರ ಸೇವೆಯನ್ನು ಮರೆಯಲಾಗುವುದಿಲ್ಲ” ಎಂದು ಅವರು ಹೇಳಿದರು.

ಮುರಳಿ ನಾಯಕ್ ಅವರ ಕುಟುಂಬಕ್ಕೆ ಸರ್ಕಾರವು 5 ಎಕರೆ ಕೃಷಿ ಭೂಮಿ, 50 ಲಕ್ಷ ರೂಪಾಯಿಗಳ ಆರ್ಥಿಕ ನೆರವು, ವಸತಿಗಾಗಿ 300 ಗಜಗಳ ಭೂಮಿ ಮತ್ತು ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಲೋಕೇಶ್ ಘೋಷಿಸಿದರು.

ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಸಚಿವರಾದ ಅನಗನಿ ಸತ್ಯ ಪ್ರಸಾದ್, ವಂಗಲಪುಡಿ ಅನಿತಾ ಮತ್ತು ಸವಿತಾ; ಸಂಸದ ಬಿ.ಕೆ. ಪಾರ್ಥಸಾರಥಿ, ಮಾಜಿ ಸಚಿವರಾದ ಪಲ್ಲೆ ರಘುನಾಥ ರೆಡ್ಡಿ ಮತ್ತು ಕಲವ ಶ್ರೀನಿವಾಸುಲು, ಶಾಸಕರಾದ ಪಲ್ಲೆ ಸಿಂಧೂರ ರೆಡ್ಡಿ, ಎಂ.ಎಸ್. ರಾಜು ಮತ್ತು ಜೆ.ಸಿ. ಪ್ರಭಾಕರ್ ರೆಡ್ಡಿ ಸೇರಿದಂತೆ ಇತರರೊಂದಿಗೆ ಗೌರವ ಸಲ್ಲಿಸಿದರು.

ಅಗ್ನಿವೀರ್ ನಾಯಕ್ ಅವರ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ದೃಢಪಡಿಸಿತು.

ಇದಕ್ಕೂ ಮೊದಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಗ್ನಿವೀರ್ ನಾಯಕ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. “ದೇಶ ರಕ್ಷಣೆಯಲ್ಲಿ ಶ್ರೀ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲಾ ಮಂಡಲದ ಮುರಳಿ ನಾಯಕ್ ಎಂಬ ಸೈನಿಕ ಸಾವನ್ನಪ್ಪಿದ ಸುದ್ದಿ ಕೇಳಿ ದುಃಖವಾಯಿತು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಮುರಳಿ ನಾಯಕ್ ಅವರಿಗೆ ಶ್ರದ್ಧಾಂಜಲಿಗಳು. ಅವರ ಕುಟುಂಬ ಸದಸ್ಯರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...