Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

- Advertisement -
- Advertisement -

ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿಯನ್ನು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ದಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಹಾಗೂ ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು ಶನಿವಾರ ಮುಂಜಾನೆ ಬುಲ್ಡೋಝರ್‌ಗಳ ಮೂಲಕ ಕೆಡವಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸದಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿತ್ತು. ಕಟ್ಟಡ ಧ್ವಂಸವನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರವಾಗಿ ಖಂಡಿಸಿದ್ದು, “ಇದು ಚಂದ್ರಬಾಬು ನಾಯ್ಡು ಅವರ ಸರ್ವಾಧಿಕಾರ, ಆಡಳಿತಾರೂಢ ಟಿಡಿಪಿಯ ವಿನಾಶಕಾರಿ ಸೇಡಿನ ರಾಜಕಾರಣ” ಎಂದಿದ್ದಾರೆ.

ಇಂದು (ಜೂನ್ 22) ಮುಂಜಾನೆ ಐದು ಗಂಟೆ ಸುಮಾರಿಗೆ ಪುರಸಭೆ ಅಧಿಕಾರಿಗಳು ಬುಲ್ಡೋಝರ್‌ಗಳ ಮೂಲಕ ಕಟ್ಟಡ ಕೆಡವಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಧ್ವಂಸ ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ವೇಳೆ ವೈಎಸ್‌ಆರ್ ಕಾಂಗ್ರೆಸ್‌ ಕಾರ್ಯಕರ್ತರು ಸ್ಥಳಕ್ಕೆ ಬಾರದಂತೆ ತಡೆಯಲು ಬ್ಯಾರಿಕೇಡ್‌ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಟ್ಟಡ ಧ್ವಂಸದಿಂದ ತಾಡೇಪಲ್ಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕಟ್ಟಡ ಕೆಡವುದನ್ನು ಪ್ರಶ್ನಿಸಿ ಇತ್ತೀಚೆಗೆ ವೈಎಸ್‌ಆರ್‌ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಕಾನೂನನ್ನು ಮೀರದಂತೆ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿತ್ತು. ಕೋರ್ಟ್‌ ಸೂಚನೆಯನ್ನು ವೈಎಸ್‌ಆರ್‌ ಕಾಂಗ್ರೆಸ್‌ ಪರ ವಕೀಲರು, ಪಾಲಿಕೆ ಆಯುಕ್ತರ ಗಮನಕ್ಕೆ ತಂದಿದ್ದರು.

ಆದರೆ, ಈ ನಡುವೆ ಕಟ್ಟಡವನ್ನು ಕೆಡವಲಾಗಿದ್ದು, ಪಾಲಿಕೆ ಅಧಿಕಾರಿಗಳು ಹೈಕೋರ್ಟ್‌ ನಿರ್ದೇಶನವನ್ನು ನಿರ್ಲಕ್ಷಿಸಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಿಸಿದೆ. ಯಾವುದೇ ನೋಟಿಸ್‌ಗಳನ್ನು ನೀಡಿಲ್ಲ. ಈ ಕ್ರಮಗಳು ನ್ಯಾಯಾಂಗ ನಿಂದನೆಯಾಗಿದೆ ಎಂದು ಪಕ್ಷವು ಹೇಳಿದೆ. ಅಧಿಕಾರಿಗಳ ನಡೆಯನ್ನು ಕೋರ್ಟ್‌ ಗಮನಕ್ಕೆ ತರುವುದಾಗಿ ತಿಳಿಸಿದೆ.

ಅಧಿಕಾರಿಗಳು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಗಳನ್ನು ತಿರಸ್ಕರಿಸಿದ್ದು, “ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಾಣವಾಗುತ್ತಿದೆ. ಹಿಂದಿನ ಜಗನ್ ಸರ್ಕಾರವು ಬೋಟ್ ಯಾರ್ಡ್ ಆಗಿ ಬಳಸಲಾಗಿದ್ದ ಭೂಮಿಯನ್ನು ವೈಎಸ್‌ಆರ್‌ ಕಾಂಗ್ರೆಸ್‌ನ ಕಚೇರಿಗೆ ಕಡಿಮೆ ವೆಚ್ಚದಲ್ಲಿ ಗುತ್ತಿಗೆಗೆ ಮಂಜೂರು ಮಾಡಿತ್ತು. ಇದು ಅಕ್ರಮ ನಿರ್ಮಾಣವಾಗಿದ್ದು, ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಬಳಿಕ, ಕಟ್ಟಡವನ್ನು ಕೆಡವಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಒಡಿಶಾ ಕಾಂಗ್ರೆಸ್ ಕಚೇರಿಗೆ ದಾಳಿ: ರಾಜ್ಯಾಧ್ಯಕ್ಷರ ಮೇಲೆ ಮಸಿ ಎರಚಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...