Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

- Advertisement -
- Advertisement -

ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿಯನ್ನು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ದಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಹಾಗೂ ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು ಶನಿವಾರ ಮುಂಜಾನೆ ಬುಲ್ಡೋಝರ್‌ಗಳ ಮೂಲಕ ಕೆಡವಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸದಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿತ್ತು. ಕಟ್ಟಡ ಧ್ವಂಸವನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರವಾಗಿ ಖಂಡಿಸಿದ್ದು, “ಇದು ಚಂದ್ರಬಾಬು ನಾಯ್ಡು ಅವರ ಸರ್ವಾಧಿಕಾರ, ಆಡಳಿತಾರೂಢ ಟಿಡಿಪಿಯ ವಿನಾಶಕಾರಿ ಸೇಡಿನ ರಾಜಕಾರಣ” ಎಂದಿದ್ದಾರೆ.

ಇಂದು (ಜೂನ್ 22) ಮುಂಜಾನೆ ಐದು ಗಂಟೆ ಸುಮಾರಿಗೆ ಪುರಸಭೆ ಅಧಿಕಾರಿಗಳು ಬುಲ್ಡೋಝರ್‌ಗಳ ಮೂಲಕ ಕಟ್ಟಡ ಕೆಡವಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಧ್ವಂಸ ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ವೇಳೆ ವೈಎಸ್‌ಆರ್ ಕಾಂಗ್ರೆಸ್‌ ಕಾರ್ಯಕರ್ತರು ಸ್ಥಳಕ್ಕೆ ಬಾರದಂತೆ ತಡೆಯಲು ಬ್ಯಾರಿಕೇಡ್‌ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಟ್ಟಡ ಧ್ವಂಸದಿಂದ ತಾಡೇಪಲ್ಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕಟ್ಟಡ ಕೆಡವುದನ್ನು ಪ್ರಶ್ನಿಸಿ ಇತ್ತೀಚೆಗೆ ವೈಎಸ್‌ಆರ್‌ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಕಾನೂನನ್ನು ಮೀರದಂತೆ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿತ್ತು. ಕೋರ್ಟ್‌ ಸೂಚನೆಯನ್ನು ವೈಎಸ್‌ಆರ್‌ ಕಾಂಗ್ರೆಸ್‌ ಪರ ವಕೀಲರು, ಪಾಲಿಕೆ ಆಯುಕ್ತರ ಗಮನಕ್ಕೆ ತಂದಿದ್ದರು.

ಆದರೆ, ಈ ನಡುವೆ ಕಟ್ಟಡವನ್ನು ಕೆಡವಲಾಗಿದ್ದು, ಪಾಲಿಕೆ ಅಧಿಕಾರಿಗಳು ಹೈಕೋರ್ಟ್‌ ನಿರ್ದೇಶನವನ್ನು ನಿರ್ಲಕ್ಷಿಸಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಿಸಿದೆ. ಯಾವುದೇ ನೋಟಿಸ್‌ಗಳನ್ನು ನೀಡಿಲ್ಲ. ಈ ಕ್ರಮಗಳು ನ್ಯಾಯಾಂಗ ನಿಂದನೆಯಾಗಿದೆ ಎಂದು ಪಕ್ಷವು ಹೇಳಿದೆ. ಅಧಿಕಾರಿಗಳ ನಡೆಯನ್ನು ಕೋರ್ಟ್‌ ಗಮನಕ್ಕೆ ತರುವುದಾಗಿ ತಿಳಿಸಿದೆ.

ಅಧಿಕಾರಿಗಳು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಗಳನ್ನು ತಿರಸ್ಕರಿಸಿದ್ದು, “ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಾಣವಾಗುತ್ತಿದೆ. ಹಿಂದಿನ ಜಗನ್ ಸರ್ಕಾರವು ಬೋಟ್ ಯಾರ್ಡ್ ಆಗಿ ಬಳಸಲಾಗಿದ್ದ ಭೂಮಿಯನ್ನು ವೈಎಸ್‌ಆರ್‌ ಕಾಂಗ್ರೆಸ್‌ನ ಕಚೇರಿಗೆ ಕಡಿಮೆ ವೆಚ್ಚದಲ್ಲಿ ಗುತ್ತಿಗೆಗೆ ಮಂಜೂರು ಮಾಡಿತ್ತು. ಇದು ಅಕ್ರಮ ನಿರ್ಮಾಣವಾಗಿದ್ದು, ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಬಳಿಕ, ಕಟ್ಟಡವನ್ನು ಕೆಡವಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಒಡಿಶಾ ಕಾಂಗ್ರೆಸ್ ಕಚೇರಿಗೆ ದಾಳಿ: ರಾಜ್ಯಾಧ್ಯಕ್ಷರ ಮೇಲೆ ಮಸಿ ಎರಚಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...