Homeಚಳವಳಿರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

- Advertisement -
- Advertisement -

ರೈತ ಮಹಿಳೆಗೆ ಪರಿಹಾರ ನೀಡುವಂತೆ ಫೆಬ್ರವರಿ 10, 2017 ರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಉದ್ದೇಶಪೂರ್ವಕವಾಗಿ ಅಸಹಕಾರ ನೀಡಿ, ನ್ಯಾಯಾಂಗ ನಿಂದನೆ ಮಾಡಿದ ಆರೋಪದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಮತ್ತು ಒಬ್ಬ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ.

ಇದೇ ವೇಳೆ ಮುಖ್ಯ ಕಾರ್ಯದರ್ಶಿ ಆದಿತ್ಯ ನಾಥ್ ದಾಸ್ ಸೇರಿದಂತೆ ಇತರ ಮೂವರು ಐಎಎಸ್ ಅಧಿಕಾರಿಗಳ ಮೇಲಿನ ಆರೋಪವನ್ನು ವಜಾಗೊಳಿಸಲಾಗಿದೆ.

ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೀರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರಾ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ.ವಿ ಶೇಷಗಿರಿ ಬಾಬು ಸೇರಿದ್ದಾರೆ.

ಮುತ್ಯಾಲ ರಾಜು ಈ ಹಿಂದೆ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿಯೂ ಸೇವೆ ಸಲ್ಲಿಸಿದ್ದರು. 2017 ರಲ್ಲಿ ಆಗಿನ ಪ್ರಧಾನ ಕಾರ್ಯದರ್ಶಿ (ಕಂದಾಯ) ಆಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಮನಮೋಹನ್ ಸಿಂಗ್ ಕೂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ಪ್ರಕರಣವೇನು…?

ತಮ್ಮ ಮೂರು ಎಕರೆ ಭೂಮಿಯನ್ನು ಕಂದಾಯ ಅಧಿಕಾರಿಗಳು ಯಾವುದೇ ಸೂಚನೆ ಅಥವಾ ಪರಿಹಾರ ನೀಡದೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಗೆ ಮಂಜೂರು ಮಾಡಿದ್ದಾರೆ ಎಂದು ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು 2017 ರಲ್ಲಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಡಿಸೆಂಬರ್ 2016 ರಲ್ಲಿ, ಕಂದಾಯ ಅಧಿಕಾರಿಗಳು ಮೂರು ಎಕರೆ ಭೂಮಿಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು ಮತ್ತು ಅದನ್ನು ಲೋಕಾಯುಕ್ತಕ್ಕೆ ವರದಿ ಮಾಡಲಾಗಿತ್ತು ಎಂದು ರೈತ ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಎ ರಾಜಶೇಖರ್ ರೆಡ್ಡಿ, ಫೆಬ್ರವರಿ 10, 2017 ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದರು. ಮೂರು ತಿಂಗಳಲ್ಲಿ ಆಕೆಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದರು.

2018 ರಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ನಂತರ ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

ರೈತ ಮಹಿಳೆಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಟ್ಟು ದೇವಾನಂದ್ ಅವರು ಐಎಎಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ಶಂಶೀರ್ ಸಿಂಗ್ ರಾವತ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ಇತರರಿಗೆ ಎರಡು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ 1,000 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಈ ವರ್ಷದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ದೇವಾನಂದ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸುವಾಗ, ಕಂದಾಯ ವಿಭಾಗೀಯ ಅಧಿಕಾರಿಯು ಜುಲೈ 6, 2020 ರಂದು ಖಾತೆಗಳ ಕಚೇರಿಗೆ ಬಿಲ್ಲುಗಳನ್ನು ಸಲ್ಲಿಸಿದ್ದನ್ನು ಗಮನಿಸಿದ್ದರು. ಜೊತೆಗೆ ಅವುಗಳನ್ನು ಮಾರ್ಚ್ 30, 2021 ರವರೆಗೆ ತೆರವಾಗಿಲ್ಲ ಎಂಬುದನ್ನು ತೀರ್ಪು ನೀಡುವಾಗ ಗಣನೆಗೆ ತೆಗೆದುಕೊಂಡಿದ್ದಾರೆ.

“ಬಿಲ್ಲುಗಳನ್ನು ತೆರವುಗೊಳಿಸಲು ಮತ್ತು ಅರ್ಜಿದಾರರಿಗೆ ಪರಿಹಾರವನ್ನು ಪಾವತಿಸಲು ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಎಂಟು ತಿಂಗಳು ವಿಳಂಬವಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ” ಎಂದು ನ್ಯಾಯಮೂರ್ತಿ ಎ.ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತರಹದ ಶಿಕ್ಷೆಗಳನ್ನು ನೀಡಿದಾಗಲೇ, ಅಧಿಕಾರಿಗಳ ಎಮ್ಮೆ ಚರ್ಮ; ಮನುಷ್ಯ ಚರ್ಮವಾಗುವುದು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...