Homeಮುಖಪುಟಆಂಧ್ರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಬೆಳಕಿನಿಂದ ರೋಗಿಗೆ ಚಿಕಿತ್ಸೆ

ಆಂಧ್ರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಬೆಳಕಿನಿಂದ ರೋಗಿಗೆ ಚಿಕಿತ್ಸೆ

- Advertisement -
- Advertisement -

ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ವಿದ್ಯುತ್ ಇಲ್ಲದೆ ಮೊಬೈಲ್ ಲೈಟ್‌ನ ಬೆಳಕಿನ ಸಹಾಯದಿಂದ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡುವ ವಿಡಿಯೋ ಸಾಮಾಜಿಕ ಜಾಲತಣಾದಲ್ಲಿ ವೈರಲ್ ಆಗಿದೆ.

ಬುಡಕಟ್ಟು ಸಮುದಾಯದ ಜನರು ಹೆಚ್ಚು ವಾಸಿಸುವ ಪ್ರದೇಶವಾದ ಕುರುಪಂ ಮಂಡಲದಲ್ಲಿರುವ ಪಾರ್ವತಿಪುರಂ ಸಮುದಾಯ ಆರೋಗ್ಯ ಕೇಂದ್ರದ ವಿಡಿಯೋ ಇದಾಗಿದೆ. ಘಟನೆಯ ವಿಡಿಯೊವನ್ನು ಹಂಚಿಕೊಂಡಿರುವ ಆಂಧ್ರದ ವಿರೋಧ ಪಕ್ಷದ ನಾಯಕ ಮತ್ತು ತೆಲುಗು ದೇಶಂ ಪಕ್ಷದ  ಮುಖ್ಯಸ್ಥ ಚಂದ್ರಬಾಬು ನಾಯ್ಡು, ವಿದ್ಯುತ್ ಕಡಿತದಿಂದ ಹಲವೆಡೆಗಳಲ್ಲಿ ಸಮಸ್ಯೆ ಉದ್ಭವಿಸುತ್ತದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಕತ್ತಲಿನಲ್ಲಿ ರೋಗಿ ಬೆಡ್ ಮೇಲೆ ಮಲಗಿರುವುದು ಕಂಡು ಬರುತ್ತಿದೆ. ಆಸ್ಪತ್ರೆಯ ಸಿಬ್ಬಂದಿಗಳು ಅವರಿಗೆ ಮೊಬೈಲ್ ಬೆಳಕಿನಲ್ಲಿ ಚಿಕಿತ್ಸೆ ನೀಡುವುದು ಕಂಡು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ  ಜಿಲ್ಲಾ ಸಂಯೋಜಕಿ (ಡಿಸಿಎಚ್‌ಎಸ್) ಡಾ.ವಾಗದೇವಿ, ಆಸ್ಪತ್ರೆಯಲ್ಲಿ ಇನ್‌ವರ್ಟರ್ ಮತ್ತು ಜನರೇಟರ್ ಎರಡನ್ನೂ ಅಳವಡಿಸಲಾಗಿತ್ತು, ಆದರೆ ವೋಲ್ಟೇಜ್ ಏರಿಳಿತದಿಂದ ಅದು ಅಸಮರ್ಪಕವಾಗಿ ವಿದ್ಯುತ್ ಹೋದ ತಕ್ಷಣ ಇನ್ವರ್ಟರ್ ಆನ್ ಆಗಲು ವಿಫಲವಾಗಿದೆ. ವೀಡಿಯೊ ಚಿತ್ರೀಕರಣದ ಬಳಿಕ ಜನರೇಟರ್ ಆನ್ ಮಾಡಲಾಗಿದೆ ಮತ್ತು ಬೆಳಕು ಬಂದಿದೆ ಎಂದು ಹೇಳಿದ್ದಾರೆ.

ಘಟನೆಯ ಹಿಂದಿನ ದಿನ ಮತ್ತು ರಾತ್ರಿ ಭಾರೀ ಮಳೆಯಾಗಿತ್ತು. ಇದರಿಂದ ವೋಲ್ಟೇಜ್ ಏರಿಳಿತವಾಗಿತ್ತು ಮತ್ತು ಇನ್ವರ್ಟರ್ ಆನ್ ಆಗಲು ಸ್ವಲ್ಪ ತಡವಾಗಿತ್ತು ಎಂದು ಡಾ. ವಾಗದೇವಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಚಂದ್ರಬಾಬು ನಾಯ್ಡು, ಕುರುಪಂನಿಂದ ವೈರಲ್ ಆಗಿರುವ ವಿಡಿಯೋಗಳು ಭಯವನ್ನುಂಟು ಮಾಡುತ್ತಿದೆ. ಅಲ್ಲಿ ವೈದ್ಯರು ವಿದ್ಯುತ್ ಇಲ್ಲದ ವೇಳೆ ಬ್ಯಾಟರಿ ದೀಪಗಳಿಂದ ರೋಗಿಗೆ ಚಿಕಿತ್ಸೆ ನೀಡಲು ಒತ್ತಾಯಿಸುತ್ತಿದ್ದಾರೆ. ನಿರಂತರ ವಿದ್ಯುತ್ ಕಡಿತದಿಂದ  ಆಂಧ್ರಪ್ರದೇಶದಲ್ಲಿ ಮನೆಗಳಿಗೆ,  ಕೃಷಿ ಮತ್ತು ಕೈಗಾರಿಕೆಗಳಿಗೆ ವ್ಯಾಪಕ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಮಾನ ಹಕ್ಕುಗಳನ್ನು ನೀಡದ ಯಾವುದೇ ಧರ್ಮವು ರೋಗವಿದ್ದಂತೆ: ಪ್ರಿಯಾಂಕ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...