Homeಮುಖಪುಟಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಪೂರೈಕೆ ಅಸ್ತವ್ಯಸ್ತಗೊಂಡಿದ್ದರಿಂದ ಐಸಿಯುನಲ್ಲಿದ್ದ 11 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಆಂಧ್ರಪ್ರದೇಶದ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದ್‌ಊ, ದೇಶವೇ ಇದರ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ, ವೈದ್ಯಕೀಯ ಆಮ್ಲಜನಕದ ಕೊರತೆಯು ಪ್ರಮುಖ ಸವಾಲಾಗಿ ಹೊರಹೊಮ್ಮಿದೆ.

ಎಸ್‌ವಿಆರ್ ರುಯಾ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್‌ ಒಳಗೆ ವೈದ್ಯಕೀಯ ಸಿಬ್ಬಂದಿ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸುಮಾರು 25 ರಿಂದ 45 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ ಎಂದು ಮೃತ ರೋಗಿಗಳ ಕುಟುಂಬಸ್ಥರು ಆರೋಪಿಸುತ್ತಿದ್ದರೂ, ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

“ಆಮ್ಲಜನಕ ಸಿಲಿಂಡರ್ ಮರು ಜೋಡಿಸುವಲ್ಲಿ ಐದು ನಿಮಿಷಗಳು ವಿಳಂಬವಾಗಿದೆ, ಇದರಿಂದ ರ್ದುಘಟನೆ ನಡೆದಿದೆ” ಎಂದು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಹೇಳಿದ್ದಾರೆ.

“ಐದು ನಿಮಿಷಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಾವು ಬೃಹತ್ ಸಿಲಿಂಡರ್‌ಗಳನ್ನು ಸಂಪರ್ಕಿಸಿದ್ದೇವೆ, ಚಿಂತೆ ಮಾಡಲು ಯಾವುದೇ ಕಾರಣವಿಲ್ಲ. ವೈದ್ಯಕೀಯ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಒಂದು ದೊಡ್ಡ ಅನಾಹುತ ತಪ್ಪಿದೆ. ಘಟನೆ ನಡೆದ ತಕ್ಷಣ ಸುಮಾರು 30 ವೈದ್ಯರು ತಕ್ಷಣ ಐಸಿಯುಗೆ ಹೋಗಿ ರೋಗಿಗಳನ್ನು ಉಪಚರಿಸಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಆಮ್ಲಜನಕ ಟ್ಯಾಂಕರ್ ಬರುವುದು ವಿಳಂಬವಾಗಿದ್ದರಿಂದ ತೊಂದರೆಯಾಗಿದೆ ಎಂದರು. ರುಯಾ ಆಸ್ಪತ್ರೆಯು 1,100 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದ್ದು, ಐಸಿಯುನಲ್ಲಿ 100 ಕ್ಕೂ ಹೆಚ್ಚು ರೋಗಿಗಳು ಮತ್ತು 400 ಆಮ್ಲಜನಕ ಸಂಪರ್ಕಿತ ಹಾಸಿಗೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 77 ಜನ ಎಮ್ ಎಲ್ ಎ ಗಳಿಗೆ ಕೇಂದ್ರ ಬದ್ರತೆ ಕೊಡಲು ಕಾರಣವೇನು ಅಷ್ಟೆಲ್ಲಾ ರಿಸ್ಕ್ ಇದ್ದರೆ ಎಲ್ಲರೂ ರಾಜಿನಾಮೆ ಕೊಟ್ಟು ಮನೆಗೆ ಹೋಗಿ. ಅದನ್ನ ಬಿಟ್ಟು ಇವರಿಗೆ ಅದರ ಖರ್ಚು ಕೊಡೋರು ಜನರೇ ಮೋದಿಗೆ ಗೊತ್ತಿರಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...