Homeಮುಖಪುಟಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಪೂರೈಕೆ ಅಸ್ತವ್ಯಸ್ತಗೊಂಡಿದ್ದರಿಂದ ಐಸಿಯುನಲ್ಲಿದ್ದ 11 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಆಂಧ್ರಪ್ರದೇಶದ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದ್‌ಊ, ದೇಶವೇ ಇದರ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ, ವೈದ್ಯಕೀಯ ಆಮ್ಲಜನಕದ ಕೊರತೆಯು ಪ್ರಮುಖ ಸವಾಲಾಗಿ ಹೊರಹೊಮ್ಮಿದೆ.

ಎಸ್‌ವಿಆರ್ ರುಯಾ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್‌ ಒಳಗೆ ವೈದ್ಯಕೀಯ ಸಿಬ್ಬಂದಿ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸುಮಾರು 25 ರಿಂದ 45 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ ಎಂದು ಮೃತ ರೋಗಿಗಳ ಕುಟುಂಬಸ್ಥರು ಆರೋಪಿಸುತ್ತಿದ್ದರೂ, ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

“ಆಮ್ಲಜನಕ ಸಿಲಿಂಡರ್ ಮರು ಜೋಡಿಸುವಲ್ಲಿ ಐದು ನಿಮಿಷಗಳು ವಿಳಂಬವಾಗಿದೆ, ಇದರಿಂದ ರ್ದುಘಟನೆ ನಡೆದಿದೆ” ಎಂದು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಹೇಳಿದ್ದಾರೆ.

“ಐದು ನಿಮಿಷಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಾವು ಬೃಹತ್ ಸಿಲಿಂಡರ್‌ಗಳನ್ನು ಸಂಪರ್ಕಿಸಿದ್ದೇವೆ, ಚಿಂತೆ ಮಾಡಲು ಯಾವುದೇ ಕಾರಣವಿಲ್ಲ. ವೈದ್ಯಕೀಯ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಒಂದು ದೊಡ್ಡ ಅನಾಹುತ ತಪ್ಪಿದೆ. ಘಟನೆ ನಡೆದ ತಕ್ಷಣ ಸುಮಾರು 30 ವೈದ್ಯರು ತಕ್ಷಣ ಐಸಿಯುಗೆ ಹೋಗಿ ರೋಗಿಗಳನ್ನು ಉಪಚರಿಸಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಆಮ್ಲಜನಕ ಟ್ಯಾಂಕರ್ ಬರುವುದು ವಿಳಂಬವಾಗಿದ್ದರಿಂದ ತೊಂದರೆಯಾಗಿದೆ ಎಂದರು. ರುಯಾ ಆಸ್ಪತ್ರೆಯು 1,100 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದ್ದು, ಐಸಿಯುನಲ್ಲಿ 100 ಕ್ಕೂ ಹೆಚ್ಚು ರೋಗಿಗಳು ಮತ್ತು 400 ಆಮ್ಲಜನಕ ಸಂಪರ್ಕಿತ ಹಾಸಿಗೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 77 ಜನ ಎಮ್ ಎಲ್ ಎ ಗಳಿಗೆ ಕೇಂದ್ರ ಬದ್ರತೆ ಕೊಡಲು ಕಾರಣವೇನು ಅಷ್ಟೆಲ್ಲಾ ರಿಸ್ಕ್ ಇದ್ದರೆ ಎಲ್ಲರೂ ರಾಜಿನಾಮೆ ಕೊಟ್ಟು ಮನೆಗೆ ಹೋಗಿ. ಅದನ್ನ ಬಿಟ್ಟು ಇವರಿಗೆ ಅದರ ಖರ್ಚು ಕೊಡೋರು ಜನರೇ ಮೋದಿಗೆ ಗೊತ್ತಿರಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...