Homeರಾಷ್ಟ್ರೀಯಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

- Advertisement -
- Advertisement -

ಆಂಧ್ರಪ್ರದೇಶ ಸರ್ಕಾರವು ಹೊಸದಾಗಿ ರಚಿಸಿರುವ ಜಿಲ್ಲೆಗೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ.ಆರ್‌. ಅಂಬೇಡ್ಕರ್ ಅವರ ಹೆಸರು ಇಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಗುಂಪೊಂದು, ಅಮಲಾಪುರಂ ಪಟ್ಟಣದಲ್ಲಿ ರಾಜ್ಯ ಸಾರಿಗೆ ಸಚಿವ ಪಿ ವಿಶ್ವರೂಪ್ ಅವರ ಮನೆಗೆ ಬೆಂಕಿ ಹಚ್ಚಿದ್ದು ಮಂಗಳವಾರ ವರದಿಯಾಗಿದೆ.

ಹೊಸದಾಗಿ ರಚಿಸಲಾದ ಕೋನಸೀಮಾ ಜಿಲ್ಲೆಯನ್ನು ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸರ್ಕಾರವು ಉದ್ದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರು ಪೊಲೀಸ್ ವಾಹನ ಮತ್ತು ಶಿಕ್ಷಣ ಸಂಸ್ಥೆಯ ಬಸ್‌ಗೂ ಬೆಂಕಿ ಹಚ್ಚಿದ್ದು, ಕಲ್ಲು ತೂರಾಟದಿಂದ ಹಲವು ಪೊಲೀಸರು ಗಾಯಗೊಂಡಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಪೊಲೀಸರು ಸಚಿವರು ಮತ್ತು ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಇದನ್ನೂ ಓದಿ: ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಘಟನೆಯಲ್ಲಿ 20 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವುದು ದುರದೃಷ್ಟಕರ. ನಾವು ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ತರುತ್ತೇವೆ ಎಂದು ರಾಜ್ಯ ಗೃಹ ಸಚಿವ ತನೇಟಿ ವನಿತಾ ಹೇಳಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ಮತ್ತು ಸಮಾಜ ವಿರೋಧಿಗಳು ಬೆಂಕಿ ಹಚ್ಚಲು ಪ್ರಚೋದನೆ ನೀಡಿದ್ದಾರೆ ಎಂದು ವನಿತಾ ಆರೋಪಿಸಿದ್ದಾರೆ.

ಏಪ್ರಿಲ್ 4 ರಂದು, ಹೊಸ ಕೋನಸೀಮಾ ಜಿಲ್ಲೆಯನ್ನು ಹಿಂದಿನ ಪೂರ್ವ ಗೋದಾವರಿ ಜಿಲ್ಲೆಯಿಂದ ವಿಭಜಿಸಿ ರಚಿಲಾಗಿತ್ತು. ಕಳೆದ ವಾರ ರಾಜ್ಯ ಸರ್ಕಾರವು ಕೋನಸೀಮವನ್ನು ಬಿ.ಆರ್.ಅಂಬೇಡ್ಕರ್ ಕೋನಸೀಮ ಜಿಲ್ಲೆ ಎಂದು ಮರುನಾಮಕರಣ ಮಾಡಲು ಕೋರಿ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿತು. ಜೊತೆಗೆ ಯಾವುದೇ ಆಕ್ಷೇಪಣೆಗಳನ್ನು ಜನರಿಂದ ಆಹ್ವಾನಿಸಿತ್ತು.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಕೋನಸೀಮಾ ಸಾಧನಾ ಸಮಿತಿಯು ಜಿಲ್ಲೆಯ ಮರುನಾಮಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಕೋನಸೀಮೆ ಹೆಸರನ್ನೆ ಉಳಿಸಿಕೊಳ್ಳಲು ಬಯಸಿದೆ. ಸಮಿತಿಯು ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದ್ದು, ಮರುನಾಮಕರಣ ವಿರೋಧಿಸಿ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರಿಗೆ ಮನವಿ ಸಲ್ಲಿಸಲು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. This is not going good for our nation India – Construction – Dr. B R Ambedkar , these three powerful words are each other don’t try to make seperat please.

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...