Homeರಾಷ್ಟ್ರೀಯಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ

- Advertisement -
- Advertisement -

ಆಂಧ್ರಪ್ರದೇಶ ಸರ್ಕಾರವು ಹೊಸದಾಗಿ ರಚಿಸಿರುವ ಜಿಲ್ಲೆಗೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಬಿ.ಆರ್‌. ಅಂಬೇಡ್ಕರ್ ಅವರ ಹೆಸರು ಇಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಗುಂಪೊಂದು, ಅಮಲಾಪುರಂ ಪಟ್ಟಣದಲ್ಲಿ ರಾಜ್ಯ ಸಾರಿಗೆ ಸಚಿವ ಪಿ ವಿಶ್ವರೂಪ್ ಅವರ ಮನೆಗೆ ಬೆಂಕಿ ಹಚ್ಚಿದ್ದು ಮಂಗಳವಾರ ವರದಿಯಾಗಿದೆ.

ಹೊಸದಾಗಿ ರಚಿಸಲಾದ ಕೋನಸೀಮಾ ಜಿಲ್ಲೆಯನ್ನು ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸರ್ಕಾರವು ಉದ್ದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾಕಾರರು ಪೊಲೀಸ್ ವಾಹನ ಮತ್ತು ಶಿಕ್ಷಣ ಸಂಸ್ಥೆಯ ಬಸ್‌ಗೂ ಬೆಂಕಿ ಹಚ್ಚಿದ್ದು, ಕಲ್ಲು ತೂರಾಟದಿಂದ ಹಲವು ಪೊಲೀಸರು ಗಾಯಗೊಂಡಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಪೊಲೀಸರು ಸಚಿವರು ಮತ್ತು ಅವರ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಇದನ್ನೂ ಓದಿ: ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಘಟನೆಯಲ್ಲಿ 20 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವುದು ದುರದೃಷ್ಟಕರ. ನಾವು ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ತರುತ್ತೇವೆ ಎಂದು ರಾಜ್ಯ ಗೃಹ ಸಚಿವ ತನೇಟಿ ವನಿತಾ ಹೇಳಿದ್ದಾರೆ.

ಕೆಲವು ರಾಜಕೀಯ ಪಕ್ಷಗಳು ಮತ್ತು ಸಮಾಜ ವಿರೋಧಿಗಳು ಬೆಂಕಿ ಹಚ್ಚಲು ಪ್ರಚೋದನೆ ನೀಡಿದ್ದಾರೆ ಎಂದು ವನಿತಾ ಆರೋಪಿಸಿದ್ದಾರೆ.

ಏಪ್ರಿಲ್ 4 ರಂದು, ಹೊಸ ಕೋನಸೀಮಾ ಜಿಲ್ಲೆಯನ್ನು ಹಿಂದಿನ ಪೂರ್ವ ಗೋದಾವರಿ ಜಿಲ್ಲೆಯಿಂದ ವಿಭಜಿಸಿ ರಚಿಲಾಗಿತ್ತು. ಕಳೆದ ವಾರ ರಾಜ್ಯ ಸರ್ಕಾರವು ಕೋನಸೀಮವನ್ನು ಬಿ.ಆರ್.ಅಂಬೇಡ್ಕರ್ ಕೋನಸೀಮ ಜಿಲ್ಲೆ ಎಂದು ಮರುನಾಮಕರಣ ಮಾಡಲು ಕೋರಿ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿತು. ಜೊತೆಗೆ ಯಾವುದೇ ಆಕ್ಷೇಪಣೆಗಳನ್ನು ಜನರಿಂದ ಆಹ್ವಾನಿಸಿತ್ತು.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಕೋನಸೀಮಾ ಸಾಧನಾ ಸಮಿತಿಯು ಜಿಲ್ಲೆಯ ಮರುನಾಮಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ಕೋನಸೀಮೆ ಹೆಸರನ್ನೆ ಉಳಿಸಿಕೊಳ್ಳಲು ಬಯಸಿದೆ. ಸಮಿತಿಯು ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದ್ದು, ಮರುನಾಮಕರಣ ವಿರೋಧಿಸಿ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರಿಗೆ ಮನವಿ ಸಲ್ಲಿಸಲು ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. This is not going good for our nation India – Construction – Dr. B R Ambedkar , these three powerful words are each other don’t try to make seperat please.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...