Homeಚಳವಳಿವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಖಾಸಗೀಕರಣಕ್ಕೆ ವಿರೋಧಿಸಿ ಆಂಧ್ರಪ್ರದೇಶ ಬಂದ್

- Advertisement -
- Advertisement -

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿನ ಉಕ್ಕು ಕಾರ್ಖಾನೆ ಖಾಸಗೀಕರಣಗೊಳಿಸಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ನಡೆದ ಆಂಧ್ರಪ್ರದೇಶ ಬಂದ್‌ ಶಾಂತಿಯುತವಾಗಿ ನಡೆದಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆಗೆ ಜನರು ಬೆಂಬಲ ನೀಡಿದ್ದಾರೆ.

‘ವಿಶಾಖಪಟ್ಟಣ ಉಕ್ಕು ಸಂರಕ್ಷಣಾ ಸಮಿತಿ’ ಆಯೋಜಿಸಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಬಿಟ್ಟು ಉಳಿದೆಲ್ಲಾ ರಾಜಕೀಯ ಪಕ್ಷಗಳು, ವಿವಿಧ ಸಾರ್ವಜನಿಕ ಸಂಘಟನೆಗಳು, ಕಾರ್ಮಿಕ ಸಂಘಟನೆ‌ಗಳು ಪಾಲ್ಗೊಂಡಿದ್ದವು.

ಆಂಧ್ರಪ್ರದೇಶ ಬಂದ್‌ಗೆ ಸರ್ಕಾರ ಕೂಡ ಬೆಂಬಲ ನೀಡುವುದಾಗಿ ಘೋಷಿಸಿದ್ದರಿಂದ ಆರ್‌ಟಿಸಿ ಬಸ್‌ಗಳು ಸ್ಥಗಿತಗೊಂಡಿದ್ದವು. ರಾಜ್ಯದ 128 ಡಿಪೋಗಳ ಬಸ್‌ಗಳು ರಸ್ತೆಗಿಳಿಯಲಿಲ್ಲ. ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿತ್ತು. ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು.

ಇದನ್ನೂ ಓದಿ: ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಖಾಸಗಿ ವಾಹನಗಳು ಕೂಡ ಬಂದ್‌ಗೆ ಬೆಂಬಲಿಸಿದ್ದವು. ಕೆಲವು ಪ್ರದೇಶಗಳಲ್ಲಿ, ಖಾಸಗಿ ಲಾರಿ ಸಾರಿಗೆ ನಿರ್ವಾಹಕರು ಮತ್ತು ಆಟೋ ಯೂನಿಯನ್‌ಗಳು ಸಹ ಮುಷ್ಕರದಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಭದ್ರತಾ ಕ್ರಮಗಳನ್ನು ರೂಪಿಸಿದ್ದರು.

స్టీల్‌ప్లాంట్ ప్రైవేటీకరణకు వ్యతిరేకంగా వివిధ పార్టీలు నిరసనలు కార్యక్రమాలు నిర్వహిస్తున్నాయి.

ವಿಶಾಖಪಟ್ಟಣಂ ಉಕ್ಕು ಸಂರಕ್ಷಣಾ ಸಮಿತಿಯ ಕರೆಯ ಮೇರೆಗೆ ಆಚರಿಸಲಾದ ಬಂದ್‌ನಲ್ಲಿ, ಆಡಳಿತಾರೂಢ ವೈಎಸ್‌ಆರ್‌ಸಿಪಿ ಮತ್ತು ಮುಖ್ಯ ವಿರೋಧ ಪಕ್ಷದ ಟಿಡಿಪಿ ಜೊತೆಗೆ, ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು, ಕಾರ್ಮಿಕ ಸಂಘಗಳು, ಪತ್ರಕರ್ತರ ಸಂಘಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ, ರ್‍ಯಾಲಿಗಳನ್ನು ಆಯೋಜಿಸಿದ್ದರು.

ಆಂಧ್ರಪ್ರದೇಶ ಎನ್‌ಜಿಒ ಸಂಘದ ಮುಖಂಡ ಎನ್.ಚಂದ್ರಶೇಖರ್ ರೆಡ್ಡಿ, ವಿಶಾಖಪಟ್ಟಣಂ ಉಕ್ಕಿನ ಉದ್ಯಮಕ್ಕಾಗಿ ಯಾವುದೇ ಹೋರಾಟಕ್ಕೆ ಸಿದ್ಧ ಎಂದು ಘೋಷಿಸಿದ್ದಾರೆ. ಎಪಿ ಎನ್‌ಜಿಒ ಸಂಘದೊಂದಿಗೆ ಪತ್ರಕರ್ತ ಸಂಘಗಳ ಮುಖಂಡರು ಕೂಡ ಬಂದ್‌ನಲ್ಲಿ ಭಾಗವಹಿಸಿದ್ದರು.

“ಸುಮಾರು 26,000 ಎಕರೆ ವಿಸ್ತೀರ್ಣದ ಕಾರ್ಖಾನೆ ಖಾಸಗೀಕರಣಗೊಳಿಸಿ 16,000 ಖಾಯಂ ನೌಕರರನ್ನು ಮತ್ತು 17,500 ಗುತ್ತಿಗೆ ಕಾರ್ಮಿಕರನ್ನು ಬೀದಿಗೆ ಹಾಕುವುದು ಸೂಕ್ತವಲ್ಲ. ಮತ್ತೊಂದು ಲಕ್ಷ ಜನರು ಈ ಕಾರ್ಖಾನೆಯಿಂದ ಪರೋಕ್ಷವಾಗಿ ಉದ್ಯೋಗದಲ್ಲಿದ್ದಾರೆ. ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಎನ್.ಚಂದ್ರಶೇಖರ್ ರೆಡ್ಡಿ ಹೇಳಿದ್ದಾರೆ.


ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...