Homeಮುಖಪುಟಆಂಧ್ರಪ್ರದೇಶ: ಸಂಪುಟ ಸಭೆಯಲ್ಲಿ ಜಾತಿಗಣತಿಗೆ ಅನುಮೋದನೆ

ಆಂಧ್ರಪ್ರದೇಶ: ಸಂಪುಟ ಸಭೆಯಲ್ಲಿ ಜಾತಿಗಣತಿಗೆ ಅನುಮೋದನೆ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಜಾತಿಗಣತಿ ನಡೆಸುವ ಪ್ರಸ್ತಾವನೆಗೆ ಆಂಧ್ರಪ್ರದೇಶದ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ.

ಜಾತಿಗಣತಿ ಕುರಿತ ನಿರ್ಧಾರದ ಬಗ್ಗೆ ಸಚಿವ ಚೆಲುಬೋಯಿನ ಶ್ರೀನಿವಾಸ ವೇಣುಗೋಪಾಲ ಕೃಷ್ಣ ಅವರು ಮಾಹಿತಿಯನ್ನು ನೀಡಿದ್ದಾರೆ. ಜಾತಿಗಣತಿ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ವೈದ್ಯಕೀಯ ದತ್ತಾಂಶವನ್ನು ಲೆಕ್ಕಹಾಕುವ ಗುರಿಯನ್ನು ಹೊಂದಿದೆ. ಈ ಮೂಲಕ ಹಿಂದುಳಿದ ಸಮುದಾಯಗಳಿಗೆ ಭದ್ರತೆಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮತ್ತು ಭಾರತದಾದ್ಯಂತ ಜಾತಿ ಗಣತಿಗೆ ಒತ್ತಾಯಿಸುತ್ತಿರುವ ಎಲ್ಲರ ಸಲಹೆಗಳನ್ನು ಪರಿಗಣಿಸಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿ ವಿವಿಧ ಜಾತಿ ಸಂಘಗಳ ಅಭಿಪ್ರಾಯಗಳನ್ನು ಕೂಡ ಪರಿಗಣಿಸಲಾಗುವುದು. ಜಾತಿಗಣತಿ ಕೋರಿ ವಿವಿಧ ಜಾತಿ ಸಂಘಗಳಿಂದ ಮಾಹಿತಿ ಪಡೆಯಲು ಐದು ಸ್ಥಳಗಳಲ್ಲಿ ದುಂಡು ಮೇಜಿನ ಚರ್ಚೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವೇಣುಗೋಪಾಲ ಕೃಷ್ಣ ಅವರು ಭಾರತದಲ್ಲಿ ಜಾತಿಗಣತಿಯು ಬಹಳ ಹಿಂದೆ ನಡೆಸಿರುವುದು ಎಂಬವುದನ್ನು  ಉಲ್ಲೇಖಿಸಿದ್ದು, ರಾಜ್ಯದಲ್ಲಿ ಜಾತಿಗಣತಿ ನಡೆಸುವ ಸಂಪುಟದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸಚಿವ ಸಂಪುಟದಲ್ಲಿ ಇದಲ್ಲದೆ 6,790 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೌಶಲ್ಯ ತಜ್ಞರ ನೇಮಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪೋಲಾವರಂ ಯೋಜನೆಯ ಭಾಗವಾಗಿ ಪ್ರವಾಹಕ್ಕೆ ಒಳಗಾದ ಗ್ರಾಮಗಳ ಪುನರ್ವಸತಿ ಪ್ರಯತ್ನಗಳ ಭಾಗವಾಗಿ ಏಲೂರು ಜಿಲ್ಲೆಯ ಪೊಲಾವರಂ, ವೇಲೇರುಪಾಡು ಮತ್ತು ಕುಕುನೂರ್ ಮಂಡಲಗಳಲ್ಲಿ 12,984 ಕುಟುಂಬಗಳಿಗೆ ಉಚಿತ ಭೂ ಹಕ್ಕು ನೋಂದಣಿ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೆಚ್ಚುವರಿಯಾಗಿ ರಾಜಮಹೇಂದ್ರವರಂ ಜಿಲ್ಲೆಯ ದೇವಿಪಟ್ಟಣಂ, ಕುನವರಂ ಮತ್ತು ವರ ರಾಮಚಂದ್ರಪುರಂ ಮಂಡಲಗಳಲ್ಲಿ 3,823 ಕುಟುಂಬಗಳಿಗೆ ಪರ್ಯಾಯ ಭೂಮಿ ಪತ್ರಗಳನ್ನು ನೀಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ.

ಅಕ್ಟೋಬರ್ 30ರಂದು ನಡೆದ ಹೂಡಿಕೆ ಕುರಿತ ಸಭೆಯ ಭಾಗವಾಗಿ ರಾಜ್ಯದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ಎರಡು ಆಹಾರ ಸಂಸ್ಕರಣಾ ಘಟಕಗಳಿಗೆ ವಿಶೇಷ ಪ್ಯಾಕೇಜ್ ನೀಡುವ SIPB ನಿರ್ಧಾರವನ್ನು ಅನುಮೋದಿಸಿದೆ. ರಸ್ತೆ ಮತ್ತು ಕಟ್ಟಡಗಳ ಇಲಾಖೆಯಲ್ಲಿ 467 ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದನ್ನು ಓದಿ: ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...