Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರಿಗೆ ಗೃಹಬಂಧನ: ಆರೋಪ

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರಿಗೆ ಗೃಹಬಂಧನ: ಆರೋಪ

- Advertisement -
- Advertisement -

ಚಂದ್ರಬಾಬು ನಾಯ್ಡು ನೇತೃತ್ವದ ರಾಜ್ಯ ಸರ್ಕಾರವು ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಗೃಹಬಂಧನದಲ್ಲಿ ಇರಿಸಿದೆ ಎಂದು ಬುಧವಾರ ಆರೋಪಿಸಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಕೇಸರಪಲ್ಲಿಯಲ್ಲಿ ತಮ್ಮನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬುಧವಾರ ಮುಂಜಾನೆ ಉದ್ದಂಡರಾಯುನಿಪಾಲಂ ಗ್ರಾಮಕ್ಕೆ ಭೇಟಿ ನೀಡದಂತೆ ತಡೆಯಲು ಪೊಲೀಸ್ ಸಿಬ್ಬಂದಿಯನ್ನು ಅವರ ಮನೆಯ ಹೊರಗೆ ನಿಯೋಜಿಸಲಾಗಿತ್ತು ಎಂದು ದಿ ಹಿಂದೂ ವರದಿ ಮಾಡಿದೆ. ಅಮರಾವತಿ ರಾಜಧಾನಿ ಕಾಮಗಾರಿಗಳನ್ನು ಪುನರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

“ನಮ್ಮ ರಾಜಧಾನಿಯ ಕಾರ್ಯವಿಧಾನಗಳನ್ನು ಕೇಳಲು ನಾನು ಪಕ್ಷದ ಕಚೇರಿಗೆ ಹೋಗುತ್ತಿರುವಾಗ ನೀವು ನಿಮ್ಮ ಪೊಲೀಸರೊಂದಿಗೆ ನನ್ನನ್ನು ಏಕೆ ತಡೆಯುತ್ತಿದ್ದೀರಿ?” ಎಂದು ಶರ್ಮಿಳಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಆಂಧ್ರಪ್ರದೇಶ ಪೊಲೀಸರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.

“ನೀವು ನನ್ನನ್ನು ಏಕೆ ಗೃಹಬಂಧನದಲ್ಲಿ ಇರಿಸಿ ಹೊರಗೆ ಬರದಂತೆ ತಡೆದಿದ್ದೀರಿ..? ನನ್ನ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲು ನೀವು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಅವರು ಹೇಳಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶರ್ಮಿಳಾ, ಕಾಂಗ್ರೆಸ್ ಈ ಪ್ರದೇಶದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಯೋಜನೆಗಳನ್ನು ರೂಪಿಸಲು ಅಮರಾವತಿ ರಾಜಧಾನಿ ಸಮಿತಿಯನ್ನು ರಚಿಸಿದೆ ಎಂದು ಹೇಳಿದ್ದಾರೆ.

“ಆದರೆ ಸಮ್ಮಿಶ್ರ ಸರ್ಕಾರವು ಕಾಂಗ್ರೆಸ್ ಸಮಿತಿಗೆ ಏಕೆ ಹೆದರುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅವರು ಏನನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ?. ಆಂಧ್ರಪ್ರದೇಶದಲ್ಲಿ ಸಭೆಗಳನ್ನು ನಡೆಸುವುದು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸುವುದರ ಮೇಲೆ ಯಾವುದೇ ನಿಷೇಧ” ಇದೆಯೇ” ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಕೇಳಿದ್ದಾರೆ.

2014 ರಲ್ಲಿ ರಾಜ್ಯ ವಿಭಜನೆಯಾದ ನಂತರ ಮತ್ತು ಹಳೆಯ ರಾಜಧಾನಿ ಹೈದರಾಬಾದ್ ತೆಲಂಗಾಣದ ಭಾಗವಾದ ನಂತರ ಆಂಧ್ರಪ್ರದೇಶ ಸರ್ಕಾರಕ್ಕೆ ಹೊಸ ಪ್ರಧಾನ ಕಚೇರಿಯ ಅಗತ್ಯವಿತ್ತು. ಆ ಸಮಯದಲ್ಲಿ, ಚಂದ್ರಬಾಬು ನಾಯ್ಡು ನೇತೃತ್ವದ ಹಿಂದಿನ ತೆಲುಗು ದೇಶಂ ಪಕ್ಷದ ಸರ್ಕಾರವು ಅಮರಾವತಿಯನ್ನು ಹೊಸ ರಾಜಧಾನಿಯಾಗುವುದಾಗಿ ಘೋಷಿಸಿತ್ತು.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ 2019 ರಲ್ಲಿ ಮುಖ್ಯಮಂತ್ರಿಯಾದ ನಂತರ, ರಾಜಧಾನಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಯಿತು. ವಿಶಾಖಪಟ್ಟಣದಲ್ಲಿ ಕಾರ್ಯಾಂಗ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿಯನ್ನು ರಚಿಸಲು ಆಂಧ್ರಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆಯನ್ನು 2020 ರಲ್ಲಿ ಪ್ರಸ್ತಾಪಿಸಲಾಯಿತು.

ಆದಾಗ್ಯೂ, ಹೊಸ ರಾಜಧಾನಿಗಾಗಿ 30,000 ಎಕರೆಗಳಿಗೂ ಹೆಚ್ಚು ಭೂಮಿಯನ್ನು ನೀಡಿದ ಅಮರಾವತಿಯ ರೈತರು ಈ ನಿರ್ಧಾರವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಹೈಕೋರ್ಟ್‌ಗೆ ಮೊರೆಹೋದ ನಂತರ ರಾಜ್ಯ ಸರ್ಕಾರವು 2021 ರಲ್ಲಿ ಮಸೂದೆಯನ್ನು ಹಿಂತೆಗೆದುಕೊಂಡಿತು. ಮೂರು ರಾಜಧಾನಿ ಮಸೂದೆಯ ವಿರುದ್ಧ ಹೈಕೋರ್ಟ್‌ನಲ್ಲಿ 55 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ.

2022 ರಲ್ಲಿ, ಆಂಧ್ರಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ, 2014 ಮತ್ತು ಭೂ ಸಂಗ್ರಹ ನಿಯಮಗಳು, 2015 ರ ನಿಬಂಧನೆಗಳ ಅಡಿಯಲ್ಲಿ ಆರು ತಿಂಗಳೊಳಗೆ ಅಮರಾವತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ರಾಜಧಾನಿ ಪ್ರದೇಶವಾಗಿ ಅಭಿವೃದ್ಧಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್‌ ಭಯೋತ್ಪಾದಕ ದಾಳಿ; ‘ಅಲ್ಲಾಹು ಅಕ್ಬರ್’ ಎಂದ ಜಿಪ್‌ಲೈನ್ ಆಪರೇಟರ್‌ ವಿಚಾರಣೆ ನಡೆಸಿದ ಎನ್‌ಐಎ

ಪಹಲ್ಗಾಮ್‌ ಭಯೋತ್ಪಾದಕ ದಾಳಿ; ‘ಅಲ್ಲಾಹು ಅಕ್ಬರ್’ ಎಂದ ಜಿಪ್‌ಲೈನ್ ಆಪರೇಟರ್‌ ವಿಚಾರಣೆ ನಡೆಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...