Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರಿಗೆ ಗೃಹಬಂಧನ: ಆರೋಪ

ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರಿಗೆ ಗೃಹಬಂಧನ: ಆರೋಪ

- Advertisement -
- Advertisement -

ಚಂದ್ರಬಾಬು ನಾಯ್ಡು ನೇತೃತ್ವದ ರಾಜ್ಯ ಸರ್ಕಾರವು ಆಂಧ್ರಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಗೃಹಬಂಧನದಲ್ಲಿ ಇರಿಸಿದೆ ಎಂದು ಬುಧವಾರ ಆರೋಪಿಸಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಕೇಸರಪಲ್ಲಿಯಲ್ಲಿ ತಮ್ಮನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬುಧವಾರ ಮುಂಜಾನೆ ಉದ್ದಂಡರಾಯುನಿಪಾಲಂ ಗ್ರಾಮಕ್ಕೆ ಭೇಟಿ ನೀಡದಂತೆ ತಡೆಯಲು ಪೊಲೀಸ್ ಸಿಬ್ಬಂದಿಯನ್ನು ಅವರ ಮನೆಯ ಹೊರಗೆ ನಿಯೋಜಿಸಲಾಗಿತ್ತು ಎಂದು ದಿ ಹಿಂದೂ ವರದಿ ಮಾಡಿದೆ. ಅಮರಾವತಿ ರಾಜಧಾನಿ ಕಾಮಗಾರಿಗಳನ್ನು ಪುನರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

“ನಮ್ಮ ರಾಜಧಾನಿಯ ಕಾರ್ಯವಿಧಾನಗಳನ್ನು ಕೇಳಲು ನಾನು ಪಕ್ಷದ ಕಚೇರಿಗೆ ಹೋಗುತ್ತಿರುವಾಗ ನೀವು ನಿಮ್ಮ ಪೊಲೀಸರೊಂದಿಗೆ ನನ್ನನ್ನು ಏಕೆ ತಡೆಯುತ್ತಿದ್ದೀರಿ?” ಎಂದು ಶರ್ಮಿಳಾ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಆಂಧ್ರಪ್ರದೇಶ ಪೊಲೀಸರನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.

“ನೀವು ನನ್ನನ್ನು ಏಕೆ ಗೃಹಬಂಧನದಲ್ಲಿ ಇರಿಸಿ ಹೊರಗೆ ಬರದಂತೆ ತಡೆದಿದ್ದೀರಿ..? ನನ್ನ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲು ನೀವು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಅವರು ಹೇಳಿದ್ದಾರೆ.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶರ್ಮಿಳಾ, ಕಾಂಗ್ರೆಸ್ ಈ ಪ್ರದೇಶದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಯೋಜನೆಗಳನ್ನು ರೂಪಿಸಲು ಅಮರಾವತಿ ರಾಜಧಾನಿ ಸಮಿತಿಯನ್ನು ರಚಿಸಿದೆ ಎಂದು ಹೇಳಿದ್ದಾರೆ.

“ಆದರೆ ಸಮ್ಮಿಶ್ರ ಸರ್ಕಾರವು ಕಾಂಗ್ರೆಸ್ ಸಮಿತಿಗೆ ಏಕೆ ಹೆದರುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅವರು ಏನನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ?. ಆಂಧ್ರಪ್ರದೇಶದಲ್ಲಿ ಸಭೆಗಳನ್ನು ನಡೆಸುವುದು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸುವುದರ ಮೇಲೆ ಯಾವುದೇ ನಿಷೇಧ” ಇದೆಯೇ” ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಕೇಳಿದ್ದಾರೆ.

2014 ರಲ್ಲಿ ರಾಜ್ಯ ವಿಭಜನೆಯಾದ ನಂತರ ಮತ್ತು ಹಳೆಯ ರಾಜಧಾನಿ ಹೈದರಾಬಾದ್ ತೆಲಂಗಾಣದ ಭಾಗವಾದ ನಂತರ ಆಂಧ್ರಪ್ರದೇಶ ಸರ್ಕಾರಕ್ಕೆ ಹೊಸ ಪ್ರಧಾನ ಕಚೇರಿಯ ಅಗತ್ಯವಿತ್ತು. ಆ ಸಮಯದಲ್ಲಿ, ಚಂದ್ರಬಾಬು ನಾಯ್ಡು ನೇತೃತ್ವದ ಹಿಂದಿನ ತೆಲುಗು ದೇಶಂ ಪಕ್ಷದ ಸರ್ಕಾರವು ಅಮರಾವತಿಯನ್ನು ಹೊಸ ರಾಜಧಾನಿಯಾಗುವುದಾಗಿ ಘೋಷಿಸಿತ್ತು.

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ 2019 ರಲ್ಲಿ ಮುಖ್ಯಮಂತ್ರಿಯಾದ ನಂತರ, ರಾಜಧಾನಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಯಿತು. ವಿಶಾಖಪಟ್ಟಣದಲ್ಲಿ ಕಾರ್ಯಾಂಗ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿಯನ್ನು ರಚಿಸಲು ಆಂಧ್ರಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆಯನ್ನು 2020 ರಲ್ಲಿ ಪ್ರಸ್ತಾಪಿಸಲಾಯಿತು.

ಆದಾಗ್ಯೂ, ಹೊಸ ರಾಜಧಾನಿಗಾಗಿ 30,000 ಎಕರೆಗಳಿಗೂ ಹೆಚ್ಚು ಭೂಮಿಯನ್ನು ನೀಡಿದ ಅಮರಾವತಿಯ ರೈತರು ಈ ನಿರ್ಧಾರವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಹೈಕೋರ್ಟ್‌ಗೆ ಮೊರೆಹೋದ ನಂತರ ರಾಜ್ಯ ಸರ್ಕಾರವು 2021 ರಲ್ಲಿ ಮಸೂದೆಯನ್ನು ಹಿಂತೆಗೆದುಕೊಂಡಿತು. ಮೂರು ರಾಜಧಾನಿ ಮಸೂದೆಯ ವಿರುದ್ಧ ಹೈಕೋರ್ಟ್‌ನಲ್ಲಿ 55 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ.

2022 ರಲ್ಲಿ, ಆಂಧ್ರಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ, 2014 ಮತ್ತು ಭೂ ಸಂಗ್ರಹ ನಿಯಮಗಳು, 2015 ರ ನಿಬಂಧನೆಗಳ ಅಡಿಯಲ್ಲಿ ಆರು ತಿಂಗಳೊಳಗೆ ಅಮರಾವತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ರಾಜಧಾನಿ ಪ್ರದೇಶವಾಗಿ ಅಭಿವೃದ್ಧಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್‌ ಭಯೋತ್ಪಾದಕ ದಾಳಿ; ‘ಅಲ್ಲಾಹು ಅಕ್ಬರ್’ ಎಂದ ಜಿಪ್‌ಲೈನ್ ಆಪರೇಟರ್‌ ವಿಚಾರಣೆ ನಡೆಸಿದ ಎನ್‌ಐಎ

ಪಹಲ್ಗಾಮ್‌ ಭಯೋತ್ಪಾದಕ ದಾಳಿ; ‘ಅಲ್ಲಾಹು ಅಕ್ಬರ್’ ಎಂದ ಜಿಪ್‌ಲೈನ್ ಆಪರೇಟರ್‌ ವಿಚಾರಣೆ ನಡೆಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...