ಕೊರೊನಾ ವೈರಸ್ ನಿಂದಾಗಿ ಸಾವಿಗೀಡಾದ 72 ವರ್ಷದ ರೋಗಿಯ ಮೃತದೇಹವನ್ನು, ಅವರ ಮನೆಯಿಂದ ಶ್ಮಶಾನಕ್ಕೆ ಜೆಸಿಬಿ ಮೂಲಕ ಸಾಗಿಸಿದ ಅಮಾನವೀಯ ಹಾಗೂ ಅಘಾತಗಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಪಾಲಾಸ ನಗರದಲ್ಲಿ ಘಟನೆ ನಡೆದಿದ್ದು, ಮನೆ-ಮನೆ ಆರೋಗ್ಯ ಸಮೀಕ್ಷೆಯ ಸಂದರ್ಭದಲ್ಲಿ ಇವರಿಗೆ ಕೊರೊನಾ ಇರುವುದು ದೃಡಪಟ್ಟಿದ್ದು ಮನೆಯಲ್ಲೇ ನಿಧನರಾಗಿದ್ದರು.
ಮೃತದೇಹವನ್ನು ಜೆಸಿಬಿ ಮೂಲಕ ಸ್ಥಳಾಂತರಿಸುವ ವಿಡಿಯೊ ವೈರಲ್ ಆಗುತ್ತಿದ್ದಂತೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು ಘಟನೆಗೆ ಸಂಭಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ವೈಯಕ್ತಿಕ ರಕ್ಷಣಾ ಸಾಧನಗಳನ್ನು ಧರಿಸಿದ ಅಧಿಕಾರಿಗಳು ಶವವನ್ನು ಜೆಸಿಬಿ ಯಂತ್ರದಲ್ಲಿ ಮನೆಯಿಂದ ಶ್ಮಶಾನಕ್ಕೆ ಸಾಗಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು ನೆಟ್ಟಿಗರು “ಮಾನವೀಯತೆ ಸತ್ತಾಗ ಹೀಗಾಗುತ್ತದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
Shocking incident from Srikakulam district of Andhra Pradesh.
Body of a 72 yr old COVID-19 patient was towed away in a JCB.
When humanity died…? pic.twitter.com/NaSYYZ61BC
— Sandeep Dhar (@sandeepdhar10) June 27, 2020
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಈ ಘಟನೆಯನ್ನು ಖಂಡಿಸಿ, ಇದು ಅಮಾನವೀಯ ಕೃತ್ಯ; ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಘಟನೆಗಾಗಿ ಪಾಲಾಸ ಪುರಸಭೆ ಆಯುಕ್ತ ನಾಗೇಂದ್ರ ಕುಮಾರ್ ಮತ್ತು ನೈರ್ಮಲ್ಯ ನಿರೀಕ್ಷಕ ಎನ್ ರಾಜೀವ್ ಅವರನ್ನು ಅಮಾನತುಗೊಳಿಸುವಂತೆ ಶ್ರೀಕಾಕುಲಂ ಜಿಲ್ಲಾಧಿಕಾರಿ ಜೆ.ನಿವಾಸ್ ಆದೇಶಿಸಿದ್ದಾರೆ.
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೂಡ ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು, “ಕೊರೊನಾ ವೈರಸ್ ಸಂತ್ರಸ್ತರ ಮೃತದೇಹಗಳನ್ನು ಪ್ಲಾಸ್ಟಿಕ್ನಲ್ಲಿ ಸುತ್ತಿ ಜೆಸಿಬಿ ಮತ್ತು ಟ್ರಾಕ್ಟರುಗಳಲ್ಲಿ ಸಾಗಿಸುವುದನ್ನು ನೋಡಿ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದ್ದೇನೆ. ಅವರು ಸಾವಿನಲ್ಲೂ ಗೌರವ ಮತ್ತು ಘನತೆಗೆ ಅರ್ಹರು. ಈ ಅಮಾನವೀಯ ನಡವಳಿಕೆಗಾಗಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ಕಿಡಿ ಕಾರಿದ್ದಾರೆ.
Utterly shocked to see the deceased bodies of #Coronavirus victims wrapped in plastic & transported on JCBs & Tractors. They deserve respect & dignity even in death. Shame on @ysjagan Govt for this inhumane treatment of the mortal remains pic.twitter.com/BobjAdIZC8
— N Chandrababu Naidu #StayHomeSaveLives (@ncbn) June 26, 2020
ಜೂನ್ 24 ರಂದು ಮತ್ತೊಂದು ಘಟನೆ ಕೂಡಾ ಇದೇ ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾದಿಂದ ಮೃತಪಟ್ಟ ಮಹಿಳೆಯನ್ನು ಟ್ರ್ಯಾಕ್ಟರ್ನಲ್ಲಿ ಸ್ಮಶಾನಕ್ಕೆ ಕರೆದೊಯ್ಯಲಾಗಿದತ್ತು.