Homeದಲಿತ್ ಫೈಲ್ಸ್ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; 'ಎನ್‌ಎಚ್‌ಆರ್‌ಸಿ'ಗೆ ದೂರು

ಆಂಧ್ರ ಪ್ರದೇಶ| ದಲಿತ ಯುವಕನ ಮೇಲೆ ರಾಜಮಹೇಂದ್ರವರಂ ಪೊಲೀಸರಿಂದ ದೌರ್ಜನ್ಯ; ‘ಎನ್‌ಎಚ್‌ಆರ್‌ಸಿ’ಗೆ ದೂರು

- Advertisement -
- Advertisement -

ದಲಿತ ಯುವಕ ಪುಲಿ ಸಾಗರ್ ವಿರುದ್ಧ ಆಂಧ್ರಪರ್ದೇಶದ ರಾಜಮಹೇಂದ್ರವರಂ ಪೊಲೀಸರ ದೌರ್ಜನ್ಯದ ಬಗ್ಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿಯೋಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಸಂಸದರಾದ ಎಂ ಗುರುಮೂರ್ತಿ, ಗೊಲ್ಲ ಬಾಬು ರಾವ್, ಪಿಲ್ಲಿ ಸುಭಾಷ್ ಚಂದ್ರ ಬೋಸ್ ಮತ್ತು ಮಾಜಿ ಸಂಸದರಾದ ಮಾರ್ಗಣಿ ಭರತ್ ಮತ್ತು ಗೋರಂಟ್ಲ ಮಾಧವ್ ಸೇರಿದಂತೆ ವೈಎಸ್‌ಆರ್‌ಸಿಪಿ ನಾಯಕರ ನಿಯೋಗವು ರಾಷ್ಟ್ರೀಯ ಎಸ್‌ಸಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನಾ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷೆ ವಿಜಯ ಭಾರತಿ ಸಯಾನಿ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ವೈಎಸ್‌ಆರ್‌ಸಿಪಿ ನಿಯೋಗದ ಜತೆಗಿದ್ದ ದಲಿತ ಯುವಕ ಆಯೋಗಕ್ಕೆ ತಮಗಾದ ಸಂಕಷ್ಟವನ್ನು ವಿವರಿಸಿದರು. ಸಾಗರ್ ಬಿ.ಎಸ್‌ಸಿ ಮತ್ತು ಬಿ.ಎಡ್. ಪದವಿ ಪಡೆದಿದ್ದಾರೆ.

ಟಿಡಿಪಿ ಶಾಸಕ ಆದಿರೆಡ್ಡಿ ಶ್ರೀನಿವಾಸ್ ಅವರ ಪ್ರವಾಹ ಪರಿಹಾರದ ಹಕ್ಕುಗಳನ್ನು ಪ್ರಶ್ನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಅವರನ್ನು ಪ್ರಕಾಶ್ ನಗರ ಪೊಲೀಸ್ ಠಾಣೆಗೆ ಕರೆಸಲಾಯಿತು ಎಂದು ಪುಲಿ ಕೃಪಾ ಆನಂದ್ ಸಾಗರ್ ಹೇಳಿದರು. ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಬಟ್ಟೆ ಬಿಚ್ಚಿಸಿ ಮಹಿಳಾ ಕಾನ್‌ಸ್ಟೆಬಲ್‌ಗಳ ಕಾವಲಿರುವ ಸೆಲ್‌ನಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್ ಎಸ್‌ಕೆ ಬಾಜಿ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಾಗರ್ ಹೇಳಿಕೊಂಡಿದ್ದಾರೆ.

“ಕೃಷ್ಣನಗರ, ಬ್ರದರೆನ್ ಚರ್ಚ್ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದು, ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ರಾಜಾಜಿನಗರ ಶಾಸಕರು ಮಾಡಿರುವ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ನಂತರ ಪ್ರಕಾಶ್ ನಗರ ಪೊಲೀಸ್ ಠಾಣೆಗೆ ಕರೆಸಲಾಯಿತು” ಎಂದು ಸಾಗರ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

“ಠಾಣೆಗೆ ಬಂದ ಮೇಲೆ, ನನಗೆ ಚಿತ್ರಹಿಂಸಡ ನೀಡಲಾಯಿತು. ಅಮಾನುಷವಾಗಿ ಥಳಿಸಿ ವಿವಸ್ತ್ರಗೊಳಿಸಲಾಯಿತು. ಈ ವೇಳೆ ಶಾಸಕ ಆದಿರೆಡ್ಡಿ ಶ್ರೀನಿವಾಸ್ ಹಿಂಬಾಲಕರು ಬಂದರು, ಪೋಲೀಸ್ ಠಾಣೆಯಲ್ಲಿ ನನ್ನನ್ನು ಅರೆಬೆತ್ತಲೆ ಭಂಗಿಯಲ್ಲಿ ನೋಡಿ, ನಗುತ್ತಾ ಠಾಣೆಯಿಂದ ಹೊರಟು ಹೋದರು. ಈ ಕ್ರಮಗಳು ಸ್ವಾತಂತ್ರ್ಯದ ಘನತೆಯ ಹಕ್ಕನ್ನು ತೀವ್ರವಾಗಿ ಉಲ್ಲಂಘಿಸುತ್ತವೆ ಮತ್ತು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ, ನಾಗರಿಕ ಮತ್ತು ರಾಜಕೀಯ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಹೇಳಿದ್ದಾರೆ.

“ಸಿ.ಐ ಸೇರಿದಂತೆ ಪೊಲೀಸ್ ಅಧಿಕಾರಿಗಳು ನನ್ನ ಜಾತಿಯನ್ನು ಗುರಿಯಾಗಿಸಿಕೊಂಡು ಅಸಂಸದೀಯ ಭಾಷೆ ಬಳಸಿ, ಎರಲಂಜಕೊಡಕ, ಭಡ್ಕೋ, ಸೇರಿದಂತೆ ಹಲವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬೆಳಿಗ್ಗೆ 11:30 ರಿಂದ ರಾತ್ರಿ 09:18 ರವರೆಗೆ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರವಾಗಿ ಬಂಧಿಸಲಾಯಿತು. ನಾನು ಸಂಜೆ 05:00 ಗಂಟೆಯವರೆಗೆ ನನ್ನ ಬಂಧನದ ಬಗ್ಗೆ ಯಾರಿಗೂ ತಿಳಿಸಲು ಅವರು ನನಗೆ ಅವಕಾಶ ನೀಡಲಿಲ್ಲ, ಇದು ನನ್ನ ಹಕ್ಕಿನ ಉಲ್ಲಂಘನೆಯಾಗಿದೆ, ನಂತರ ನನ್ನ ವಕೀಲರು ಪೊಲೀಸ್ ಠಾಣೆಗೆ ಬಂದರು” ಎಂದು ತಮ್ಮ ದೂರಿನಲ್ಲಿ ಸಾಗರ್ ವಿವರಿಸಿದ್ದಾರೆ.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವೈಎಸ್‌ಆರ್‌ಸಿಪಿ ಮುಖಂಡರು, ಪೊಲೀಸರ ದರ್ಪವನ್ನು ಖಂಡಿಸಿದರು.

“ಜೀವಿಸುವ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಸಾಗರ್ ಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲ” ಎಂದು ವೈಎಸ್‌ಆರ್‌ಸಿಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ; ಹಿರಿಯ ಸಾಹಿತಿ ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ – ತಮಿಳನಾಡು ಸರ್ಕಾರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...