Homeಆರೋಗ್ಯಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

- Advertisement -
- Advertisement -

ಡಿಕಂಪೆನ್ಸೇಟೆಡ್ ಸಿರೋಸಿಸ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ತನ್ನ ತಂದೆಯನ್ನು ಉಳಿಸಿಕೊಳ್ಳಲು, 21 ವರ್ಷದ ಯುವತಿಯೊಬ್ಬಳು ತನ್ನ ಅರ್ಧ ಯಕೃತ್ (ಲಿವರ್) ಅನ್ನು ಕಸಿ ಮಾಡಿಸಿ, ತಂದೆಗೆ ಅಳವಡಿಸಿರುವ ಮಾನವೀಯ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. 

“ಅಧಿಕ ರಕ್ತದೊತ್ತಡದಿಂದಾಗಿ ನನ್ನ ತಂದೆಗೆ ಯಕೃತ್ತಿನ ವೈಫಲ್ಯವಾಗಿತ್ತು. ಅಲ್ಲದೆ, ಅವರು ಕಾಮಾಲೆ ಮತ್ತು ಹೊಟ್ಟೆಯಲ್ಲಿ ದ್ರವದ ಶೇಖರಣೆಯಿಂದ ಬಳಲುತ್ತಿದ್ದರು. ನನ್ನ ಯಕೃತ್ತನ್ನು ಕಸಿ ಮಾಡಿಸಿ ಅಳವಡಿಸುವುದರಿಂದ ನಾನು ನನ್ನ ತಂದೆಯನ್ನು ಬದುಕಿಸಿಕೊಳ್ಳಬಹುದು ಎಂದು ವೈದ್ಯರು ಹೇಳಿದರು. ಹಾಗೆಯೇ ಮಾಡಿದ್ದಕ್ಕೆ ನನಗೆ ಸಂಸತ ತಂದಿದೆ” ಎಂದು 21 ವರ್ಷದ ಯುವತಿ ವಾಣಿ ಹೇಳಿದ್ದಾರೆ.

52 ವರ್ಷದ ಆಕೆಯ ತಂದೆ ಎಂ ನೀಲಕಂಠೇಶ್ವರ ರಾವ್ ಅವರಿಗೆ ಒಂದು ವಾರದಲ್ಲಿ ಪ್ರತಿ ಸೆಷನ್‌ಗೆ 9 ರಿಂದ 10 ಲೀಟರ್ ದ್ರವವನ್ನು ಅವರ ಹೊಟ್ಟೆಯಿಂದ ಹೊರತೆಗೆಯಬೇಕಾಗಿತ್ತು. ಶಸ್ತ್ರಚಿಕಿತ್ಸೆಗೂ ಪೂರ್ವ ಅವಧಿಯಲ್ಲಿ 20 ರಿಂದ 25 ಸೆಷನ್‌ಗಳಲ್ಲಿ ದ್ರವನ್ನು ತೆಗೆಯಲಾಗಿತ್ತು. ಅದು ಅವರ ಮೂತ್ರಪಿಂಡದ ಕಾರ್ಯನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಅವರಿಗೆ ಆರೋಗ್ಯಕರ ಯಕೃತ್ತನ್ನು ಒದಗಿಸುವುದು ಪರಿಹಾರವಾಗಿತ್ತು. ವಾಣಿ ತನ್ನ ತಂದೆಯನ್ನು ಉಳಿಸಲು ತನ್ನ ಅರ್ಧದಷ್ಟು ಲಿವರ್ ದಾನ ಮಾಡಿದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಡಾ ಮೊಹಮ್ಮದ್ ನಯೀಮ್, ಡಾ ರವಿಶಂಕರ್ ಕಿಂಜರಾಪು ಮತ್ತು ಡಾ ರಾಜಕುಮಾರ್ ಅವರನ್ನೊಳಗೊಂಡ ತಂಡವು ವಾಣಿಯಿಂದ ಯಕೃತ್ತನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದೆ. ಬಳಿಕ, ಅಂಗಾಂಗ ಕೊಯ್ಲು ಮತ್ತು ಕಸಿ ಮಾಡುವ 14 ಗಂಟೆಗಳ ಪ್ರಕ್ರಿಯೆಯಲ್ಲಿ ಆಕೆಯ ತಂದೆಗೆ ಯಕೃತ್‌ ಅಳವಡಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಆರು ದಿನಗಳ ನಂತರ ವಾಣಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಡಾ ನಯೀಮ್ ಹೇಳಿದ್ದಾರೆ.

“ಲೈವ್ ಲಿವರ್ ಟ್ರಾನ್ಸ್‌ಪ್ಲಾಂಟೇಶನ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ಅದರ ಮೂಲಕ 50% ರಿಂದ 60% ಅಂಗವನ್ನು ದಾನಿಯಿಂದ ಕೊಯ್ಲು ಮಾಡಲಾಗುತ್ತದೆ ಮತ್ತು ರೋಗಿಗೆ ಅಳವಡಿಸಲಾಗುತ್ತದೆ. ರೋಗಿಯು ತೀವ್ರವಾಗಿ ಅಸ್ವಸ್ಥರಾಗಿದ್ದರಿಂದ ಶವದ ಯಕೃತ್ತಿನ ಕಸಿ ಮಾಡುವುದು ಬೇಡವೆಂದು ನಾವು ನಿರ್ಧರಿಸಿದೆವು. ಅದಕ್ಕಾಗಿ, ಬದುಕಿರುವ ವ್ಯಕ್ತಿಯಿಂದ ಯಕೃತ್‌ ಪಡೆಯಲಾಯಿತು. ವಾಣಿ ಅವರ ತಂದೆ ಆರು ವಾರಗಳಲ್ಲಿ ಸಾಮಾನ್ಯ ಜೀವನಕ್ಕೆ ಮರಳುತ್ತಾರೆ” ಎಂದು ವೈದ್ಯರು ಹೇಳಿದ್ದಾರೆ.

ದಾನಿ ಮತ್ತು ಸ್ವೀಕರಿಸುವವರ ಯಕೃತ್ತು ಮೂರರಿಂದ ನಾಲ್ಕು ವಾರಗಳಲ್ಲಿ ಸಾಮಾನ್ಯ ಗಾತ್ರದ 90% ಕ್ಕೆ ಬೆಳೆಯುತ್ತದೆ. “ಶಸ್ತ್ರಚಿಕಿತ್ಸಕರ ಪರಿಣಿತ ತಂಡಗಳು, ಸುಧಾರಿತ ತಂತ್ರಜ್ಞಾನ ಮತ್ತು ಪೆರಿಆಪರೇಟಿವ್ ಅವಧಿಯಲ್ಲಿ ಉತ್ತಮ ಆರೈಕೆ ಮಾಡುವುದರಿಂದ, ದಾನಿಗಳಿಗೆ ಅಪಾಯವು ಕಡಿಮೆಯಾಗಿದೆ” ಎಂದು ಡಾ ಕಿಂಜರಾಪು ಹೇಳಿದ್ದಾರೆ.

ಸರಾಸರಿ 1,00,000 ಭಾರತೀಯರು ಯಕೃತ್ತಿನ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ತಡವಾದ ರೋಗನಿರ್ಣಯವು 15% ರಿಂದ 20% ರಷ್ಟು ಸಾವಿಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 


ಇದನ್ನೂ ಓದಿ: ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...