Homeಆರೋಗ್ಯಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

ಆಂಧ್ರಪ್ರದೇಶ: ಅರ್ಧ ಯಕೃತ್ ದಾನ ಮಾಡಿ ತಂದೆ ಜೀವ ಉಳಿಸಿದ ಮಗಳು

- Advertisement -
- Advertisement -

ಡಿಕಂಪೆನ್ಸೇಟೆಡ್ ಸಿರೋಸಿಸ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ತನ್ನ ತಂದೆಯನ್ನು ಉಳಿಸಿಕೊಳ್ಳಲು, 21 ವರ್ಷದ ಯುವತಿಯೊಬ್ಬಳು ತನ್ನ ಅರ್ಧ ಯಕೃತ್ (ಲಿವರ್) ಅನ್ನು ಕಸಿ ಮಾಡಿಸಿ, ತಂದೆಗೆ ಅಳವಡಿಸಿರುವ ಮಾನವೀಯ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. 

“ಅಧಿಕ ರಕ್ತದೊತ್ತಡದಿಂದಾಗಿ ನನ್ನ ತಂದೆಗೆ ಯಕೃತ್ತಿನ ವೈಫಲ್ಯವಾಗಿತ್ತು. ಅಲ್ಲದೆ, ಅವರು ಕಾಮಾಲೆ ಮತ್ತು ಹೊಟ್ಟೆಯಲ್ಲಿ ದ್ರವದ ಶೇಖರಣೆಯಿಂದ ಬಳಲುತ್ತಿದ್ದರು. ನನ್ನ ಯಕೃತ್ತನ್ನು ಕಸಿ ಮಾಡಿಸಿ ಅಳವಡಿಸುವುದರಿಂದ ನಾನು ನನ್ನ ತಂದೆಯನ್ನು ಬದುಕಿಸಿಕೊಳ್ಳಬಹುದು ಎಂದು ವೈದ್ಯರು ಹೇಳಿದರು. ಹಾಗೆಯೇ ಮಾಡಿದ್ದಕ್ಕೆ ನನಗೆ ಸಂಸತ ತಂದಿದೆ” ಎಂದು 21 ವರ್ಷದ ಯುವತಿ ವಾಣಿ ಹೇಳಿದ್ದಾರೆ.

52 ವರ್ಷದ ಆಕೆಯ ತಂದೆ ಎಂ ನೀಲಕಂಠೇಶ್ವರ ರಾವ್ ಅವರಿಗೆ ಒಂದು ವಾರದಲ್ಲಿ ಪ್ರತಿ ಸೆಷನ್‌ಗೆ 9 ರಿಂದ 10 ಲೀಟರ್ ದ್ರವವನ್ನು ಅವರ ಹೊಟ್ಟೆಯಿಂದ ಹೊರತೆಗೆಯಬೇಕಾಗಿತ್ತು. ಶಸ್ತ್ರಚಿಕಿತ್ಸೆಗೂ ಪೂರ್ವ ಅವಧಿಯಲ್ಲಿ 20 ರಿಂದ 25 ಸೆಷನ್‌ಗಳಲ್ಲಿ ದ್ರವನ್ನು ತೆಗೆಯಲಾಗಿತ್ತು. ಅದು ಅವರ ಮೂತ್ರಪಿಂಡದ ಕಾರ್ಯನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಅವರಿಗೆ ಆರೋಗ್ಯಕರ ಯಕೃತ್ತನ್ನು ಒದಗಿಸುವುದು ಪರಿಹಾರವಾಗಿತ್ತು. ವಾಣಿ ತನ್ನ ತಂದೆಯನ್ನು ಉಳಿಸಲು ತನ್ನ ಅರ್ಧದಷ್ಟು ಲಿವರ್ ದಾನ ಮಾಡಿದರು ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

ಡಾ ಮೊಹಮ್ಮದ್ ನಯೀಮ್, ಡಾ ರವಿಶಂಕರ್ ಕಿಂಜರಾಪು ಮತ್ತು ಡಾ ರಾಜಕುಮಾರ್ ಅವರನ್ನೊಳಗೊಂಡ ತಂಡವು ವಾಣಿಯಿಂದ ಯಕೃತ್ತನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದೆ. ಬಳಿಕ, ಅಂಗಾಂಗ ಕೊಯ್ಲು ಮತ್ತು ಕಸಿ ಮಾಡುವ 14 ಗಂಟೆಗಳ ಪ್ರಕ್ರಿಯೆಯಲ್ಲಿ ಆಕೆಯ ತಂದೆಗೆ ಯಕೃತ್‌ ಅಳವಡಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ಆರು ದಿನಗಳ ನಂತರ ವಾಣಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಡಾ ನಯೀಮ್ ಹೇಳಿದ್ದಾರೆ.

“ಲೈವ್ ಲಿವರ್ ಟ್ರಾನ್ಸ್‌ಪ್ಲಾಂಟೇಶನ್ ಒಂದು ಸಂಕೀರ್ಣ ಶಸ್ತ್ರಚಿಕಿತ್ಸೆಯಾಗಿದ್ದು, ಅದರ ಮೂಲಕ 50% ರಿಂದ 60% ಅಂಗವನ್ನು ದಾನಿಯಿಂದ ಕೊಯ್ಲು ಮಾಡಲಾಗುತ್ತದೆ ಮತ್ತು ರೋಗಿಗೆ ಅಳವಡಿಸಲಾಗುತ್ತದೆ. ರೋಗಿಯು ತೀವ್ರವಾಗಿ ಅಸ್ವಸ್ಥರಾಗಿದ್ದರಿಂದ ಶವದ ಯಕೃತ್ತಿನ ಕಸಿ ಮಾಡುವುದು ಬೇಡವೆಂದು ನಾವು ನಿರ್ಧರಿಸಿದೆವು. ಅದಕ್ಕಾಗಿ, ಬದುಕಿರುವ ವ್ಯಕ್ತಿಯಿಂದ ಯಕೃತ್‌ ಪಡೆಯಲಾಯಿತು. ವಾಣಿ ಅವರ ತಂದೆ ಆರು ವಾರಗಳಲ್ಲಿ ಸಾಮಾನ್ಯ ಜೀವನಕ್ಕೆ ಮರಳುತ್ತಾರೆ” ಎಂದು ವೈದ್ಯರು ಹೇಳಿದ್ದಾರೆ.

ದಾನಿ ಮತ್ತು ಸ್ವೀಕರಿಸುವವರ ಯಕೃತ್ತು ಮೂರರಿಂದ ನಾಲ್ಕು ವಾರಗಳಲ್ಲಿ ಸಾಮಾನ್ಯ ಗಾತ್ರದ 90% ಕ್ಕೆ ಬೆಳೆಯುತ್ತದೆ. “ಶಸ್ತ್ರಚಿಕಿತ್ಸಕರ ಪರಿಣಿತ ತಂಡಗಳು, ಸುಧಾರಿತ ತಂತ್ರಜ್ಞಾನ ಮತ್ತು ಪೆರಿಆಪರೇಟಿವ್ ಅವಧಿಯಲ್ಲಿ ಉತ್ತಮ ಆರೈಕೆ ಮಾಡುವುದರಿಂದ, ದಾನಿಗಳಿಗೆ ಅಪಾಯವು ಕಡಿಮೆಯಾಗಿದೆ” ಎಂದು ಡಾ ಕಿಂಜರಾಪು ಹೇಳಿದ್ದಾರೆ.

ಸರಾಸರಿ 1,00,000 ಭಾರತೀಯರು ಯಕೃತ್ತಿನ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಮತ್ತು ತಡವಾದ ರೋಗನಿರ್ಣಯವು 15% ರಿಂದ 20% ರಷ್ಟು ಸಾವಿಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 


ಇದನ್ನೂ ಓದಿ: ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...