Homeರಾಷ್ಟ್ರೀಯಆಂಧ್ರಪ್ರದೇಶ: ಮೋಟಾರ್ ಶೋ ರೂಂನಲ್ಲಿ ಬೆಂಕಿ ಅವಘಡ; 25 ಇ-ಬೈಕ್‌ಗಳು ಸುಟ್ಟು ಭಸ್ಮ

ಆಂಧ್ರಪ್ರದೇಶ: ಮೋಟಾರ್ ಶೋ ರೂಂನಲ್ಲಿ ಬೆಂಕಿ ಅವಘಡ; 25 ಇ-ಬೈಕ್‌ಗಳು ಸುಟ್ಟು ಭಸ್ಮ

- Advertisement -
- Advertisement -

ಆಂಧ್ರಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಮೋಟಾರು ಶೋ ರೂಂನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ 25 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 24ರ ಸೋಮವಾರ ಮುಂಜಾನೆ ಪಾಲಕೊಂಡ ಪಟ್ಟಣದ ಮನಮ್ ಮೋಟಾರ್ಸ್‌ನಲ್ಲಿ ಈ ಘಟನೆ ಸಂಭವಿಸಿದೆ.

ದೀಪಾವಳಿಯ ವಿಶೇಷ ರಿಯಾಯಿತಿ ಮಾರಾಟಕ್ಕಾಗಿ ಶೋರೂಮ್‌ನಲ್ಲಿ ಇರಿಸಲಾಗಿದ್ದ ಇ-ಬೈಕ್ ಮತ್ತು ಬ್ಯಾಟರಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡದಿಂದ ಸುಮಾರು 50 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಶೋರೂಂ ಆಡಳಿತ ಮಂಡಳಿ ಹೇಳಿದೆ ಎಂದು ಐಎಎನ್ಎಸ್ ವರದಿ ಮಾಡಿದೆ.

ಇದನ್ನೂ ಓದಿ: ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸೆಪ್ಟೆಂಬರ್‌ನಲ್ಲಿ ಹೈದರಾಬಾದ್‌ನ ಎಲೆಕ್ಟ್ರಿಕ್ ವಾಹನ ಶೋರೂಮ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಎಂಟು ಜನರು ಸಾವನ್ನಪ್ಪಿದ್ದರು. ಬಹುಮಹಡಿ ಕಟ್ಟಡದ ನೆಲಮಾಳಿಗೆಯಲ್ಲಿರುವ ಶೋರೂಮ್‌ನಿಂದ ಬೆಂಕಿಯು ಮೇಲಿನ ಮಹಡಿಯಲ್ಲಿರುವ ಹೋಟೆಲ್‌ಗೆ ವ್ಯಾಪಿಸಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿ, ಅಲ್ಲಿ ತಂಗಿದ್ದ ಹಲವಾರು ಮಂದಿ ಗಾಯಗೊಂಡಿದ್ದರು.

ಶೋರೂಂನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಬಳಿ ಬೆಂಕಿ ಕಾಣಿಸಿಕೊಂಡು ಕೆಲವೇ ಸೆಕೆಂಡ್‌ಗಳಲ್ಲಿ ವ್ಯಾಪಿಸಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ತಿಳಿದು ಬಂದಿತ್ತು. ರೂಬಿ ಪ್ರೈಡ್ ಹೋಟೆಲ್ ಮತ್ತು ರೂಬಿ ಮೋಟರ್ ಅನ್ನು ಹೊಂದಿದ್ದ ನೆಲ ಮಾಳಿಗೆ ಮತ್ತು ಅಂತಸ್ತು ಸೇರಿದಂತೆ ಕಟ್ಟಡವು 28 ಕೊಠಡಿಗಳನ್ನು ಹೊಂದಿತ್ತು. ಅಪಘಾತದ ಸಮಯದಲ್ಲಿ ಸುಮಾರು 25 ಜನರು ಹೋಟೆಲ್‌ನಲ್ಲಿ ಇದ್ದರು.

ಈ ಘಟನೆಯಲ್ಲಿ ಅಗ್ನಿಶಾಮಕ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ಲಾಡ್ಜ್ ಮತ್ತು ಇ-ಬೈಕ್ ಶೋರೂಮ್‌ನ ಕಾರ್ಯನಿರ್ವಹಣೆಯಲ್ಲಿ ಹಲವಾರು ಲೋಪಗಳನ್ನು ಪೊಲೀಸರು ಕಂಡುಕೊಂಡಿದ್ದಾರೆ. ನೆಲಮಾಳಿಗೆಯನ್ನು ಕಾನೂನುಬಾಹಿರವಾಗಿ ವ್ಯಾಪಾರ ಚಟುವಟಿಕೆಗೆ ಬಳಸಿಕೊಂಡಿರುವುದು ಮತ್ತೊಂದು ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕು

ಎಪ್ರಿಲ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ವಿಜಯವಾಡದ ಮನೆಯೊಂದರಲ್ಲಿ ವಿದ್ಯುತ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜ್ ಮಾಡಲು ತಂದಿದ್ದಾಗ ಸ್ಫೋಟ ಸಂಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...