Homeಮುಖಪುಟಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಕೂಲಿ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಸಂತ್ರಸ್ತೆಯ ಗಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ.

ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು ಒಬ್ಬ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿವೆ. ಇನ್ನಿಬ್ಬರು ಆರೋಪಿಗಳು ವಯಸ್ಕರಾಗಿದ್ದು, ಅವರನ್ನು ಪಲುಬೊಯಿನಾ ವಿಜಯಕೃಷ್ಣ (20), ಪಲುಚೂರಿ ನಿಖಿಲ್ (25) ಎಂದು ಗುರುತಿಸಲಾಗಿದೆ. ಈ ಹಿಂದೆಯೇ ಕಳ್ಳತನದ ಪ್ರಕರಣವೊಂದರಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯಾಗಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾವಿನಿಂದ ಪಾರಾಗಿರುವ ಮಹಿಳೆ, ಆಕೆಯ ಪತಿ ಮತ್ತು ಅವರ ಮೂವರು ಮಕ್ಕಳು ಎರಡು ದಿನಗಳ ಹಿಂದೆ ಗುಂಟೂರಿಗೆ ಕಲ್ಲಿನ ಕೆಲಸಕ್ಕಾಗಿ ಬಂದಿದ್ದರು. ಮಹಿಳೆಯು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾರೆ. ಅವರು ತೆನಾಲಿಗೆ ರೈಲು ಹತ್ತಿ, ರೇಪಲ್ಲಿಗೆ ಬಂದಿಳಿದಿದ್ದರು.

ಏಪ್ರಿಲ್ 30ರ ಮಧ್ಯರಾತ್ರಿ ರೇಪಲ್ಲಿಗೆ ತಲುಪಿದರು. ಪ್ಲಾಟ್‌ಫಾರ್ಮ್‌ನಲ್ಲಿಯೇ ಉಳಿಯಲು ನಿರ್ಧರಿಸಿದರು. “ಮೂರು ಜನ ಆರೋಪಿಗಳು ಟೈಮ್‌ ಕೇಳಲೆಂದು ಇವರನ್ನು ಎಬ್ಬಿಸಿದರು. ಸಂತ್ರಸ್ತೆಯ ಗಂಡ ತಮ್ಮ ಬಳಿ ವಾಚ್ ಇಲ್ಲ ಎಂದು ಹೇಳಿದಾಗ ಆರೋಪಿಗಳು ಹಲ್ಲೆ ನಡೆಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಡಪಾಯಿಗಳಿಂದ 750 ರೂ.ಗಳನ್ನು ಆರೋಪಿಗಳು ಕಸಿದುಕೊಂಡಿದ್ದು, ಅದನ್ನು ವಾಪಸ್‌ ಪಡೆಯಲು ಯತ್ನಿಸಿದಾಗ ಮಹಿಳೆಯನ್ನು ಸಮೀಪದ ಪೊದೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಪತಿ ಸ್ಥಳೀಯರ ಸಹಾಯದಿಂದ ರೇಪಲ್ಲೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಆ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಕೆಲವು ಪೊದೆಗಳಲ್ಲಿ ಸಂತ್ರಸ್ತೆ ಪತ್ತೆಯಾಗಿದ್ದಾರೆ. ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರೇಪಲ್ಲೆ ಟೌನ್ ಸಿಐ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಗಂಡನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಬಾಪಟ್ಲಾ ಎಸ್ಪಿ ವಕುಲ್ ಜಿಂದಾಲ್ ಮಹಿಳೆಯನ್ನು ಭೇಟಿಯಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದರು. ನಂತರ ತನಿಖೆಗಾಗಿ ಮೂರು ತಂಡಗಳನ್ನು ರಚಿಸಿದರು. ಸಾಕ್ಷ್ಯ ಸಂಗ್ರಹಿಸಲು ಶ್ವಾನ ದಳ ಹಾಗೂ ಸುಳಿವು ತಂಡವನ್ನು ಬಳಸಲಾಯಿತು. ಇದಾದ ಬೆನ್ನಲ್ಲೇ ರೇಪಲ್ಲೆ ಡಿಎಸ್‌ಪಿ ನೇತೃತ್ವದ ವಿಶೇಷ ತಂಡ, ಪಟ್ಟಣ ಸಿಐ ತಂಡಗಳು ಆರೋಪಿಗಳನ್ನು ರೇಪಲ್ಲೆ ಟೌನ್‌ನ ನೇತಾಜಿ ನಗರದಲ್ಲಿ ಬಂಧಿಸಿ, ಅವರಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಆಂಧ್ರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗಾಗಿ ದಿಶಾ ಕಾಯ್ದೆ ಜಾರಿಗೊಳಿಸಲಾಗಿದೆ. ತ್ವರಿತ ತನಿಖೆ, ವಿಚಾರಣೆ ಮತ್ತು ಶಿಕ್ಷೆಯನ್ನು ನೀಡುವುದಕ್ಕಾಗಿ ಈ ಕಾಯ್ದೆ ಜಾರಿಯಾಗಿರುವ ಹೊತ್ತಿನಲ್ಲೇ ಈ ಆಘಾತಕಾರಿ ಘಟನೆ ನಡೆದಿದೆ.

ದಿಶಾ ಕಾಯಿದೆ 2019ರ ಪ್ರಕಾರ ತಕ್ಷಣವೇ ಆರೋಪಪಟ್ಟಿ ಸಲ್ಲಿಸುವಂತೆ ಎಸ್ಪಿ, ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಪಿಗಳ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ವಿ ರಜಿನಿ ಪ್ರತಿಕ್ರಿಯಿಸಿ, “ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...