Homeದಲಿತ್ ಫೈಲ್ಸ್ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

- Advertisement -
- Advertisement -

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಾವತಿಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ನಾಲ್ವರು ಶಂಕಿತರನ್ನು ಕಡಪಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆಯು ಪ್ರದ್ದಟೂರು ಪಟ್ಟಣದ ದೇವಸ್ಥಾನದ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಕುರಿತು ವರದಿಯಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗ್ರಾಮೀಣ ಮಹಿಳಾ ಪೊಲೀಸ್ ಸಿಬ್ಬಂದಿ (ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ) ಗಮನಿಸಿದ್ದು, ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಬಾಲಕಿ ಮಾತನಾಡಿರುವ ವಿಡಿಯೊ ಕೂಡ ಆನ್‌ಲೈನ್‌ನಲ್ಲಿ ಹರಿದಾಡಿದೆ.

“ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ಆದರೆ ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ಬುರಾಜನ್ ಆರೋಪವನ್ನು ನಿರಾಕರಿಸಿದ್ದಾರೆ. “ಪ್ರಕರಣ ದಾಖಲಿಸಲು ವಿಳಂಬವಾಗಿದೆ. ಮೇ 11ರ ಬುಧವಾರದಂದು ಪ್ರಕರಣ ದಾಖಲಿಸಲಾಗಿದ್ದು, ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

“ಬಾಲಕಿಯ ಕುಟುಂಬ ಸದಸ್ಯರು ಯಾವುದೇ ಔಪಚಾರಿಕ ದೂರು ನೀಡಿರಲಿಲ್ಲ” ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ನಾವು ಅವರೊಂದಿಗೆ ಸಮಾಲೋಚಿಸಲು ಮತ್ತು ದೂರು ತೆಗೆದುಕೊಳ್ಳಲು ಪ್ರಯತ್ನಿಸಿದ್ದೇವೆ. ಆದರೆ ಅವರು ದೂರು ನೀಡಲಿಲ್ಲ. ಆಕೆಯ ತಂದೆ ಮಾನಸಿಕವಾಗಿ ನೊಂದಿದ್ದರು, ದೂರು ನೀಡಲು ಸಾಧ್ಯವಾಗಲಿಲ್ಲ. ನಿನ್ನೆ (ಬುಧವಾರ) ಬೆಳಗ್ಗೆ ಐಸಿಡಿಎಸ್ (ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವಿಸಸ್) ಅಧಿಕಾರಿಯೊಬ್ಬರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಂತರ ವೀಡಿಯೊವನ್ನು ಪರಿಶೀಲಿಸಲಾಗಿದೆ. ನಾಲ್ವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಎಸ್‌ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮೇ 4 ರಂದು ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ (ಜಿಎಂಎಸ್‌ಕೆ) ಗರ್ಭಿಣಿ ಬಾಲಕಿಯನ್ನು ಮೊದಲು ಗಮನಿಸಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದ್ದರು. ಆದರೆ ಬಾಲಕಿ ಜಿಎಂಎಸ್‌ಕೆ ಸಹಾಯವನ್ನು ನಿರಾಕರಿಸಿ ಅಲ್ಲಿಂದ ತೆರಳಿದ್ದಳು” ಎಂದು ಹೆಚ್ಚುವರಿ ಎಸ್‌ಪಿ ಪೂಜಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ ಮೇ 8 ರಂದು, ಜಿಎಂಎಸ್‌ಕೆ  ಬಾಲಕಿಯನ್ನು ಮತ್ತೆ ಪತ್ತೆಹಚ್ಚಿ ಪೊಲೀಸ್ ಠಾಣೆಗೆ ಕರೆದೋಯ್ದರು. ಬಾಲಕಿ ತನ್ನ ಕುಟುಂಬ ಅಥವಾ ಪೋಷಕರ ಬಗ್ಗೆ ವಿವರಗಳನ್ನು ಹಂಚಿಕೊಳ್ಳದ ಕಾರಣ ಪೊಲೀಸ್ ಅಧಿಕಾರಿಗಳು ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಿದರು. ಮೇ 9 ರಂದು ಪೊಲೀಸರು ಆಕೆಯ ತಂದೆ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚಿದರು. ಆದರೆ ಪೋಷಕರು ಪ್ರಕರಣ ದಾಖಲಿಸಲು ನಿರಾಕರಿಸಿದರು. ಮೇ 11ರಂದು, ಐಸಿಡಿಎಸ್ ಅಧಿಕಾರಿಯ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಆರು ತಿಂಗಳ ಹಿಂದೆ ಇಬ್ಬರು ಯುವಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಾಲ್ಕು ತಿಂಗಳ ಹಿಂದೆ ಮತ್ತಿಬ್ಬರು ಯುವಕರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಪೂಜಿತಾ ಅವರನ್ನು ಪ್ರದತ್ತೂರಿಗೆ ಕಳುಹಿಸಲಾಗಿದೆ. ಲೈಂಗಿಕ ಅಪರಾಧ ಮಕ್ಕಳ ರಕ್ಷಣೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟೂರು ಕಡಪಾ ಜಿಲ್ಲೆಯಲ್ಲಿ ನಡೆದ ಘಟನೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳನ್ನು ಹಿಡಿಯುವ ಪ್ರಯತ್ನ ಮಾಡುವ ಬದಲು ಸಾಮೂಹಿಕ ಅತ್ಯಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ನಿಯಮ ಉಲ್ಲಂಘಿಸಿ ಬಾಲಕಿಯನ್ನು ಖಾಸಗಿ ಮನೆಗೆ ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...