Homeದಲಿತ್ ಫೈಲ್ಸ್ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

- Advertisement -
- Advertisement -

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಾವತಿಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ನಾಲ್ವರು ಶಂಕಿತರನ್ನು ಕಡಪಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆಯು ಪ್ರದ್ದಟೂರು ಪಟ್ಟಣದ ದೇವಸ್ಥಾನದ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಕುರಿತು ವರದಿಯಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗ್ರಾಮೀಣ ಮಹಿಳಾ ಪೊಲೀಸ್ ಸಿಬ್ಬಂದಿ (ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ) ಗಮನಿಸಿದ್ದು, ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಬಾಲಕಿ ಮಾತನಾಡಿರುವ ವಿಡಿಯೊ ಕೂಡ ಆನ್‌ಲೈನ್‌ನಲ್ಲಿ ಹರಿದಾಡಿದೆ.

“ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ಆದರೆ ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ಬುರಾಜನ್ ಆರೋಪವನ್ನು ನಿರಾಕರಿಸಿದ್ದಾರೆ. “ಪ್ರಕರಣ ದಾಖಲಿಸಲು ವಿಳಂಬವಾಗಿದೆ. ಮೇ 11ರ ಬುಧವಾರದಂದು ಪ್ರಕರಣ ದಾಖಲಿಸಲಾಗಿದ್ದು, ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

“ಬಾಲಕಿಯ ಕುಟುಂಬ ಸದಸ್ಯರು ಯಾವುದೇ ಔಪಚಾರಿಕ ದೂರು ನೀಡಿರಲಿಲ್ಲ” ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ನಾವು ಅವರೊಂದಿಗೆ ಸಮಾಲೋಚಿಸಲು ಮತ್ತು ದೂರು ತೆಗೆದುಕೊಳ್ಳಲು ಪ್ರಯತ್ನಿಸಿದ್ದೇವೆ. ಆದರೆ ಅವರು ದೂರು ನೀಡಲಿಲ್ಲ. ಆಕೆಯ ತಂದೆ ಮಾನಸಿಕವಾಗಿ ನೊಂದಿದ್ದರು, ದೂರು ನೀಡಲು ಸಾಧ್ಯವಾಗಲಿಲ್ಲ. ನಿನ್ನೆ (ಬುಧವಾರ) ಬೆಳಗ್ಗೆ ಐಸಿಡಿಎಸ್ (ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವಿಸಸ್) ಅಧಿಕಾರಿಯೊಬ್ಬರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಂತರ ವೀಡಿಯೊವನ್ನು ಪರಿಶೀಲಿಸಲಾಗಿದೆ. ನಾಲ್ವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಎಸ್‌ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮೇ 4 ರಂದು ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ (ಜಿಎಂಎಸ್‌ಕೆ) ಗರ್ಭಿಣಿ ಬಾಲಕಿಯನ್ನು ಮೊದಲು ಗಮನಿಸಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದ್ದರು. ಆದರೆ ಬಾಲಕಿ ಜಿಎಂಎಸ್‌ಕೆ ಸಹಾಯವನ್ನು ನಿರಾಕರಿಸಿ ಅಲ್ಲಿಂದ ತೆರಳಿದ್ದಳು” ಎಂದು ಹೆಚ್ಚುವರಿ ಎಸ್‌ಪಿ ಪೂಜಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ ಮೇ 8 ರಂದು, ಜಿಎಂಎಸ್‌ಕೆ  ಬಾಲಕಿಯನ್ನು ಮತ್ತೆ ಪತ್ತೆಹಚ್ಚಿ ಪೊಲೀಸ್ ಠಾಣೆಗೆ ಕರೆದೋಯ್ದರು. ಬಾಲಕಿ ತನ್ನ ಕುಟುಂಬ ಅಥವಾ ಪೋಷಕರ ಬಗ್ಗೆ ವಿವರಗಳನ್ನು ಹಂಚಿಕೊಳ್ಳದ ಕಾರಣ ಪೊಲೀಸ್ ಅಧಿಕಾರಿಗಳು ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಿದರು. ಮೇ 9 ರಂದು ಪೊಲೀಸರು ಆಕೆಯ ತಂದೆ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚಿದರು. ಆದರೆ ಪೋಷಕರು ಪ್ರಕರಣ ದಾಖಲಿಸಲು ನಿರಾಕರಿಸಿದರು. ಮೇ 11ರಂದು, ಐಸಿಡಿಎಸ್ ಅಧಿಕಾರಿಯ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಆರು ತಿಂಗಳ ಹಿಂದೆ ಇಬ್ಬರು ಯುವಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಾಲ್ಕು ತಿಂಗಳ ಹಿಂದೆ ಮತ್ತಿಬ್ಬರು ಯುವಕರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಪೂಜಿತಾ ಅವರನ್ನು ಪ್ರದತ್ತೂರಿಗೆ ಕಳುಹಿಸಲಾಗಿದೆ. ಲೈಂಗಿಕ ಅಪರಾಧ ಮಕ್ಕಳ ರಕ್ಷಣೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟೂರು ಕಡಪಾ ಜಿಲ್ಲೆಯಲ್ಲಿ ನಡೆದ ಘಟನೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳನ್ನು ಹಿಡಿಯುವ ಪ್ರಯತ್ನ ಮಾಡುವ ಬದಲು ಸಾಮೂಹಿಕ ಅತ್ಯಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ನಿಯಮ ಉಲ್ಲಂಘಿಸಿ ಬಾಲಕಿಯನ್ನು ಖಾಸಗಿ ಮನೆಗೆ ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...