Homeದಲಿತ್ ಫೈಲ್ಸ್ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

- Advertisement -
- Advertisement -

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಾವತಿಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ನಾಲ್ವರು ಶಂಕಿತರನ್ನು ಕಡಪಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆಯು ಪ್ರದ್ದಟೂರು ಪಟ್ಟಣದ ದೇವಸ್ಥಾನದ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಕುರಿತು ವರದಿಯಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗ್ರಾಮೀಣ ಮಹಿಳಾ ಪೊಲೀಸ್ ಸಿಬ್ಬಂದಿ (ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ) ಗಮನಿಸಿದ್ದು, ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಬಾಲಕಿ ಮಾತನಾಡಿರುವ ವಿಡಿಯೊ ಕೂಡ ಆನ್‌ಲೈನ್‌ನಲ್ಲಿ ಹರಿದಾಡಿದೆ.

“ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ಆದರೆ ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ಬುರಾಜನ್ ಆರೋಪವನ್ನು ನಿರಾಕರಿಸಿದ್ದಾರೆ. “ಪ್ರಕರಣ ದಾಖಲಿಸಲು ವಿಳಂಬವಾಗಿದೆ. ಮೇ 11ರ ಬುಧವಾರದಂದು ಪ್ರಕರಣ ದಾಖಲಿಸಲಾಗಿದ್ದು, ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

“ಬಾಲಕಿಯ ಕುಟುಂಬ ಸದಸ್ಯರು ಯಾವುದೇ ಔಪಚಾರಿಕ ದೂರು ನೀಡಿರಲಿಲ್ಲ” ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ನಾವು ಅವರೊಂದಿಗೆ ಸಮಾಲೋಚಿಸಲು ಮತ್ತು ದೂರು ತೆಗೆದುಕೊಳ್ಳಲು ಪ್ರಯತ್ನಿಸಿದ್ದೇವೆ. ಆದರೆ ಅವರು ದೂರು ನೀಡಲಿಲ್ಲ. ಆಕೆಯ ತಂದೆ ಮಾನಸಿಕವಾಗಿ ನೊಂದಿದ್ದರು, ದೂರು ನೀಡಲು ಸಾಧ್ಯವಾಗಲಿಲ್ಲ. ನಿನ್ನೆ (ಬುಧವಾರ) ಬೆಳಗ್ಗೆ ಐಸಿಡಿಎಸ್ (ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವಿಸಸ್) ಅಧಿಕಾರಿಯೊಬ್ಬರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಂತರ ವೀಡಿಯೊವನ್ನು ಪರಿಶೀಲಿಸಲಾಗಿದೆ. ನಾಲ್ವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಎಸ್‌ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮೇ 4 ರಂದು ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ (ಜಿಎಂಎಸ್‌ಕೆ) ಗರ್ಭಿಣಿ ಬಾಲಕಿಯನ್ನು ಮೊದಲು ಗಮನಿಸಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದ್ದರು. ಆದರೆ ಬಾಲಕಿ ಜಿಎಂಎಸ್‌ಕೆ ಸಹಾಯವನ್ನು ನಿರಾಕರಿಸಿ ಅಲ್ಲಿಂದ ತೆರಳಿದ್ದಳು” ಎಂದು ಹೆಚ್ಚುವರಿ ಎಸ್‌ಪಿ ಪೂಜಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ ಮೇ 8 ರಂದು, ಜಿಎಂಎಸ್‌ಕೆ  ಬಾಲಕಿಯನ್ನು ಮತ್ತೆ ಪತ್ತೆಹಚ್ಚಿ ಪೊಲೀಸ್ ಠಾಣೆಗೆ ಕರೆದೋಯ್ದರು. ಬಾಲಕಿ ತನ್ನ ಕುಟುಂಬ ಅಥವಾ ಪೋಷಕರ ಬಗ್ಗೆ ವಿವರಗಳನ್ನು ಹಂಚಿಕೊಳ್ಳದ ಕಾರಣ ಪೊಲೀಸ್ ಅಧಿಕಾರಿಗಳು ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಿದರು. ಮೇ 9 ರಂದು ಪೊಲೀಸರು ಆಕೆಯ ತಂದೆ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚಿದರು. ಆದರೆ ಪೋಷಕರು ಪ್ರಕರಣ ದಾಖಲಿಸಲು ನಿರಾಕರಿಸಿದರು. ಮೇ 11ರಂದು, ಐಸಿಡಿಎಸ್ ಅಧಿಕಾರಿಯ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಆರು ತಿಂಗಳ ಹಿಂದೆ ಇಬ್ಬರು ಯುವಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಾಲ್ಕು ತಿಂಗಳ ಹಿಂದೆ ಮತ್ತಿಬ್ಬರು ಯುವಕರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಪೂಜಿತಾ ಅವರನ್ನು ಪ್ರದತ್ತೂರಿಗೆ ಕಳುಹಿಸಲಾಗಿದೆ. ಲೈಂಗಿಕ ಅಪರಾಧ ಮಕ್ಕಳ ರಕ್ಷಣೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟೂರು ಕಡಪಾ ಜಿಲ್ಲೆಯಲ್ಲಿ ನಡೆದ ಘಟನೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳನ್ನು ಹಿಡಿಯುವ ಪ್ರಯತ್ನ ಮಾಡುವ ಬದಲು ಸಾಮೂಹಿಕ ಅತ್ಯಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ನಿಯಮ ಉಲ್ಲಂಘಿಸಿ ಬಾಲಕಿಯನ್ನು ಖಾಸಗಿ ಮನೆಗೆ ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...