Homeಮುಖಪುಟಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ

ಆಂಧ್ರಪ್ರದೇಶದಲ್ಲಿ ಮರ್ಯಾದೆಗೇಡು ಹತ್ಯೆ ಶಂಕೆ; ಅಂತಧರ್ಮೀಯ ವಿವಾಹವಾಗಿದ್ದ ಯುವತಿ ಶವವಾಗಿ ಪತ್ತೆ

- Advertisement -
- Advertisement -

ಅನ್ಯಧರ್ಮೀಯ ಯುವಕನ ಪ್ರೀತಿಗೆ ಪೋಷಕರು ವಿರೋಧಿಸಿದ್ದು, ಊರು ತೊರೆದು ವಿವಾಹವಾಗಿದ್ದ ಯುವತಿಯೊಬ್ಬಳ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಪೋಷಕರೇ ಹತ್ಯೆ (ಮರ್ಯಾದೆಗೇಡು ಹತ್ಯೆ) ಮಾಡಿರಬಹುದು ಎಂದು ಶಂಕಿಸಲಾಗಿದೆ.

ಚಿತ್ತೂರು ಜಿಲ್ಲೆಯ ಯಾಸ್ಮಿನ್ ಬಾನು ಎಂಬಾಕೆ ಕಳೆದ ಕಳೆದ ನಾಲ್ಕು ವರ್ಷಗಳಿಂದ ಹಿಂದು ಯುವಕ ಸಾಯಿ ತೇಜ ಎಂಬಾತನನ್ನು ಪ್ರೀತಿಸುತ್ತಿದ್ದರು. ಆದರೆ ಇದಕ್ಕೆ ಬಾನು ಅವರ ಕುಟುಂಬದಿಂದ ವಿರೋಧವಿತ್ತು. ಹೀಗಾಗಿ, ಅವರು ಇದೇ ವರ್ಷದ ಫೆಬ್ರವರಿಯಲ್ಲಿ ಮನೆ ತೊರೆದು, ಯುವಕನೊಂದಿಗೆ ವಿವಾಹವಾಗಿದ್ದರು.

ಮದುವೆಯ ಬಳಿಕ ತಮ್ಮ ಸುರಕ್ಷತೆಗೆ ಪೋಷಕರಿಂದ ಬೆದರಿಕೆ ಇದೆಯೆಂದು ಪೊಲೀಸ್‌ ರಕ್ಷಣೆಯನ್ನೂ ಪಡೆದಿದ್ದರು. ಆದರೂ, ಇದೀಗ ಆಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಪೋಷಕರೇ ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಬಾನು ಅವರ ಪತಿ ತೇಜ ಪ್ರತಿಕ್ರಿಯಿಸಿ, “ತಮ್ಮ ಮದುವೆಯಾದಾಗಿನಿಂದ ಬಾನು ಅವರ ಅಣ್ಣ ಮತ್ತು ತಂಗಿ ಪದೇಪದೆ ಕರೆ ಮಾಡುತ್ತಿದ್ದರು. ಬಾನು ಸಾವಿಗೂ ಮೂರು ದಿನಗಳ ಮುನ್ನ ತಮಗೆ ಬಾನು ಅವರ ಕುಟುಂಬಸ್ಥರು ಕರೆಮಾಡಿದ್ದರು. ಬಾನು ಅವರ ತಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಮನೆಗೆ ಬಂದು ಭೇಟಿಯಾಗುವಂತೆ ಒತ್ತಾಯಿಸಿದ್ದರು” ಎಂದು ವಿವರಿಸಿದ್ದಾರೆ.

“ತಂದೆಯನ್ನು ಭೇಟಿ ಮಾಡಲು ಬಾನು ತನ್ನ ಪೋಷಕರ ಮನೆಗೆ ಹೋಗಿದ್ದರು. ತೆರಳಿದ ಕೆಲವೇ ಗಂಟೆಗಳಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಕರೆ ಬಂದಿತು. ಆ ನಂತರ, ಬಾನು ಸಾವನ್ನಪ್ಪಿದ್ದಾರೆಂದು ಅವರ ಕುಟುಂಬದವರು ತಿಳಿಸಿದರು” ಎಂದು ತೇಜ ಹೇಳಿದ್ದಾರೆ.

ಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಹೇಳುತ್ತಿದ್ದಾರೆ. ಆದರೆ, ಇದು ಕೊಲೆ ಎಂದು ತೇಜ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿರುವ ತೇಜ, “ಬಾನು ಅವರನ್ನು ಆಕೆಯ ಕುಟುಂಬದವರು ಕೊಲೆ ಮಾಡಿದ್ದಾರೆ. ಆತ್ಮಹತ್ಯೆಯೆಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆಕೆಯನ್ನು ಪೋಷಕರ ಮನೆಗೆ ಕರೆದುಕೊಂಡ ಹೋಗಿದ್ದ ಸಂಬಂಧಿಕರು ಪರಾರಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಾನು ಅವರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣ ಭೂ ವ್ಯವಹಾರ ಪ್ರಕರಣ: ‘ನನ್ನನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ..’; ಎಂದ ರಾಬರ್ಟ್ ವಾದ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...