Homeಮುಖಪುಟಆಂಧ್ರ ಪ್ರದೇಶ: ರ್‍ಯಾಗಿಂಗ್ ಮಾಡುತ್ತಿದ್ದ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಜೆಎನ್‌ಟಿಯುಕೆ

ಆಂಧ್ರ ಪ್ರದೇಶ: ರ್‍ಯಾಗಿಂಗ್ ಮಾಡುತ್ತಿದ್ದ 11 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಜೆಎನ್‌ಟಿಯುಕೆ

- Advertisement -
- Advertisement -

ಆಂಧ್ರ ಪ್ರದೇಶದ ಕಾಕಿನಾಡದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ (ಜೆಎನ್‌ಟಿಯು) 11 ವಿದ್ಯಾರ್ಥಿಗಳನ್ನು ರ್‍ಯಾಗಿಂಗ್ ಮಾಡಿದ ಆರೋಪದಲ್ಲಿ 15 ದಿನಗಳ ಕಾಲ ತರಗತಿಯಿಂದ ಮತ್ತು ಎರಡು ವಾರಗಳ ಕಾಲ ವಿಶ್ವವಿದ್ಯಾಲಯದ ಹಾಸ್ಟೆಲ್‌ನಿಂದ ಉಪಕುಲಪತಿಗಳು ಅಮಾನತುಗೊಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್‌ನ ಮೂರನೇ ವರ್ಷದ ಒಂಬತ್ತು ಮತ್ತು ಎರಡನೇ ವರ್ಷದಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

“ಸೋಮವಾರ, ಶ್ರೀಕಾಕುಳಂ ಮೂಲದ ಪ್ರಥಮ ವರ್ಷದ ವಿದ್ಯಾರ್ಥಿ ರಾತ್ರಿ ಊಟ ಮುಗಿಸಿ ಮೆಸ್‌ನಿಂದ ಹೊರಬರುತ್ತಿದ್ದಾಗ ಹಿರಿಯ ವಿದ್ಯಾರ್ಥಿಗಳು ಕರೆದು ತಮ್ಮ ಲ್ಯಾಬ್ ರಿಪೋರ್ಟ್ ಕೆಲಸ ಮಾಡುವಂತೆ ಹೇಳಿದರು. ನಂತರ, ವಿದ್ಯಾರ್ಥಿಯು ವಿಶಾಖಪಟ್ಟಣಂನಲ್ಲಿ ಓದುತ್ತಿದ್ದಾಗ ತನ್ನ ಸ್ನೇಹಿತನಾಗಿದ್ದ ಸ್ನೇಹಿತನಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ಬಳಿಕ ಅವರು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ವೆಬ್‌ಸೈಟ್‌ನ ಅಡಿಯಲ್ಲಿ ರಾಷ್ಟ್ರೀಯ ರ್‍ಯಾಗಿಂಗ್ ತಡೆಗಟ್ಟುವಿಕೆ ಯೋಜನೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದು ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ.ಎಂ.ಎಚ್.ಎಂ.ಕೃಷ್ಣ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು ನಗರ ದಕ್ಷಿಣ: ಅನೈತಿಕ ಪೊಲೀಸ್ ಪಹರೆಯಲ್ಲಿ ಹಿಂದುತ್ವ-ಬಂಧುತ್ವ ಹೋರಾಟ!

ನಂತರ ಯುಜಿಸಿ ವಿಶ್ವವಿದ್ಯಾನಿಲಯದ ವಿಸಿ ಜಿವಿಆರ್ ಪ್ರಸಾದ್ ರಾಜು ಅವರಿಗೆ ಈ ಬಗ್ಗೆ ಎಚ್ಚರಿಕೆ ನೀಡಿತ್ತು. ಅವರು ಘಟನೆಯ ಬಗ್ಗೆ ಪ್ರಾಂಶುಪಾಲರು ಮತ್ತು ಕಾಕಿನಾಡ ಜಿಲ್ಲಾ ಎಸ್‌ಪಿಗೆ ತಿಳಿಸಿದ್ದಾರೆ.

ಬಳಿಕ ಪ್ರಾಂಶುಪಾಲರು, ಹಾಸ್ಟೆಲ್ ಮ್ಯಾನೇಜರ್ ಸೇರಿದಂತೆ ಒಂಬತ್ತು ಪ್ರಾಧ್ಯಾಪಕರನ್ನೊಳಗೊಂಡ ರ್‍ಯಾಗಿಂಗ್ ವಿರೋಧಿ ಸಮಿತಿಯನ್ನು ಮಂಗಳವಾರ ರಚಿಸಲಾಗಿದೆ. ಸಮಿತಿಯು ದೂರುದಾರು ಮತ್ತು 11 ಹಿರಿಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಶನಿವಾರ ವರದಿ ಸಲ್ಲಿಸಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ಹಿರಿಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ.

ರ್‍ಯಾಗಿಂಗ್ ವಿರೋಧಿ ಸಹಾಯವಾಣಿ: 1800-180-5522
ಇ-ಮೇಲ್: [email protected]


ಇದನ್ನೂ ಓದಿ: ಸರಿಯಾದ ನಿರ್ಧಾರಕ್ಕೆ ಬಂದಿಲ್ಲವೆಂದರೆ ಬೃಹತ್ ಪ್ರತಿಭಟನೆ: ಪಠ್ಯಪುಸ್ತಕ ಹಗರಣದ ವಿರುದ್ಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಲಿಂಗಾಯತ ಸ್ವಾಮೀಜಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....