Homeಮುಖಪುಟಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

- Advertisement -
- Advertisement -

ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯ ಗಳಿಸಿದೆ. 75 ಪುರಸಭೆಗಳಲ್ಲಿ 74 ರಲ್ಲಿ ಜಯಗಳಿಸಿದೆ. ಎಲ್ಲಾ 12 ಮಹಾನಗರ ಪಾಲಿಕೆಗಳಲ್ಲಿಯೂ ಜಯಭೇರಿ ಬಾರಿಸಿದೆ.

ವಿಶಾಖಪಟ್ಟಣಂ, ವಿಜಯವಾಡ ಮತ್ತು ಗುಂಟೂರು ನಗರಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. ವಿರೋಧ ಪಕ್ಷ ಟಿಡಿಪಿ ಅನೇಕ ಕಡೆಗಳಲ್ಲಿ ಎರಡು ಅಂಕಿಗಳನ್ನು ದಾಟಲು ಸಹ ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ಟಿಡಿಪಿ, ತಾಡಿಪತ್ರಿ ಮತ್ತು ಮೈದುಕೂರ್‌ನಲ್ಲಿ ಬಹುಮತದ ವಾರ್ಡ್‌ಗಳನ್ನು ಗೆದ್ದಿದ್ದರೂ ಕೂಡ, ವೈಎಸ್‌ಆರ್‌ಸಿ ಈ ಎರಡು ಕಡೆಗಳಲ್ಲಿ ಅಧ್ಯಕ್ಷರ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಜನಸೇನೆ-ಬಿಜೆಪಿ ಮೈತ್ರಿಗೆ ಯಾವುದೇ ಸ್ಥಾನ ಲಭಿಸಿಲ್ಲ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿಯು ವೈಎಸ್‌ಆರ್‌ಸಿಯ ಗೆಲುವು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ವಿಜಯಕ್ಕೆ ನಾಂದಿ ಹಾಡಿದೆ ಎನ್ನಲಾಗುತ್ತಿದೆ. ಈ ಬಾರಿಯ ಕಾರ್ಪೋರೇಷನ್‌ ಎಲೆಕ್ಷನ್‌ ಅನ್ನು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಗಂಭೀರವಾಗಿ ಪರಿಗಣಿಸಿದರು. ನಗರ ಪ್ರದೇಶದಲ್ಲಿ ತಾವಿನ್ನು ಪ್ರಭಾವ ಹೊಂದಿದ್ದೇನೆ ಎಂಬುದನ್ನು ಸಾಬೀತು ಪಡಿಸಲು ಈ ಬಾರಿ ಪ್ರಯತ್ನಿಸಿದ್ದರು. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಲೋಕೇಶ್ ರಾಜ್ಯದ ಎಲ್ಲಾ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಈ ಬಾರಿ ಭಾರಿ ಪ್ರಚಾರ ನಡೆಸಿದ್ದರು.

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಅದ್ಭುತ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

2019 ರ ಚುನಾವಣೆಯಲ್ಲಿ ವೈಎಸ್‌ಆರ್‌ಸಿ, ವಿಧಾನಸಭೆಯಲ್ಲಿ ಸುಮಾರು ಶೇಕಡಾ 85 ರಷ್ಟು ಸ್ಥಾನಗಳನ್ನು ಗೆದ್ದಿತ್ತು. ಪಕ್ಷೇತರ ಆಧಾರದ ಮೇಲೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡಾ 83 ರಷ್ಟು ಪಂಚಾಯಿತಿಗಳಲ್ಲಿ ಗೆಲುವು ಪಡೆದುಕೊಂಡಿತ್ತು. ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇಕಡಾ 100ರಷ್ಟು ಗೆಲುವು ಪಡೆದಿದೆ.

ವಿಶೇಷವೆಂದರೆ ಈ ಬಾರಿ ಚುನಾವಣೆಯಲ್ಲಿ ಜಗನ್‌ ಮೋಹನ್‌ ರೆಡ್ಡಿ ಪ್ರಚಾರ ನಡೆಸಿಲ್ಲ ಎಂಬುದು. ತಾವು ಎಲ್ಲಾ ವರ್ಗದ ಜನರಿಗಾಗಿ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳು, ತಾನು ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿದ್ದೇನೆ ಎಂಬ ವಿಶ್ವಾಸದಲ್ಲಿ ಜಗನ್‌ ಸುಮ್ಮನಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...