Homeಮುಖಪುಟಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

- Advertisement -
- Advertisement -

ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯ ಗಳಿಸಿದೆ. 75 ಪುರಸಭೆಗಳಲ್ಲಿ 74 ರಲ್ಲಿ ಜಯಗಳಿಸಿದೆ. ಎಲ್ಲಾ 12 ಮಹಾನಗರ ಪಾಲಿಕೆಗಳಲ್ಲಿಯೂ ಜಯಭೇರಿ ಬಾರಿಸಿದೆ.

ವಿಶಾಖಪಟ್ಟಣಂ, ವಿಜಯವಾಡ ಮತ್ತು ಗುಂಟೂರು ನಗರಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. ವಿರೋಧ ಪಕ್ಷ ಟಿಡಿಪಿ ಅನೇಕ ಕಡೆಗಳಲ್ಲಿ ಎರಡು ಅಂಕಿಗಳನ್ನು ದಾಟಲು ಸಹ ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ಟಿಡಿಪಿ, ತಾಡಿಪತ್ರಿ ಮತ್ತು ಮೈದುಕೂರ್‌ನಲ್ಲಿ ಬಹುಮತದ ವಾರ್ಡ್‌ಗಳನ್ನು ಗೆದ್ದಿದ್ದರೂ ಕೂಡ, ವೈಎಸ್‌ಆರ್‌ಸಿ ಈ ಎರಡು ಕಡೆಗಳಲ್ಲಿ ಅಧ್ಯಕ್ಷರ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಜನಸೇನೆ-ಬಿಜೆಪಿ ಮೈತ್ರಿಗೆ ಯಾವುದೇ ಸ್ಥಾನ ಲಭಿಸಿಲ್ಲ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿಯು ವೈಎಸ್‌ಆರ್‌ಸಿಯ ಗೆಲುವು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ವಿಜಯಕ್ಕೆ ನಾಂದಿ ಹಾಡಿದೆ ಎನ್ನಲಾಗುತ್ತಿದೆ. ಈ ಬಾರಿಯ ಕಾರ್ಪೋರೇಷನ್‌ ಎಲೆಕ್ಷನ್‌ ಅನ್ನು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಗಂಭೀರವಾಗಿ ಪರಿಗಣಿಸಿದರು. ನಗರ ಪ್ರದೇಶದಲ್ಲಿ ತಾವಿನ್ನು ಪ್ರಭಾವ ಹೊಂದಿದ್ದೇನೆ ಎಂಬುದನ್ನು ಸಾಬೀತು ಪಡಿಸಲು ಈ ಬಾರಿ ಪ್ರಯತ್ನಿಸಿದ್ದರು. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಲೋಕೇಶ್ ರಾಜ್ಯದ ಎಲ್ಲಾ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಈ ಬಾರಿ ಭಾರಿ ಪ್ರಚಾರ ನಡೆಸಿದ್ದರು.

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಅದ್ಭುತ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

2019 ರ ಚುನಾವಣೆಯಲ್ಲಿ ವೈಎಸ್‌ಆರ್‌ಸಿ, ವಿಧಾನಸಭೆಯಲ್ಲಿ ಸುಮಾರು ಶೇಕಡಾ 85 ರಷ್ಟು ಸ್ಥಾನಗಳನ್ನು ಗೆದ್ದಿತ್ತು. ಪಕ್ಷೇತರ ಆಧಾರದ ಮೇಲೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡಾ 83 ರಷ್ಟು ಪಂಚಾಯಿತಿಗಳಲ್ಲಿ ಗೆಲುವು ಪಡೆದುಕೊಂಡಿತ್ತು. ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇಕಡಾ 100ರಷ್ಟು ಗೆಲುವು ಪಡೆದಿದೆ.

ವಿಶೇಷವೆಂದರೆ ಈ ಬಾರಿ ಚುನಾವಣೆಯಲ್ಲಿ ಜಗನ್‌ ಮೋಹನ್‌ ರೆಡ್ಡಿ ಪ್ರಚಾರ ನಡೆಸಿಲ್ಲ ಎಂಬುದು. ತಾವು ಎಲ್ಲಾ ವರ್ಗದ ಜನರಿಗಾಗಿ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳು, ತಾನು ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿದ್ದೇನೆ ಎಂಬ ವಿಶ್ವಾಸದಲ್ಲಿ ಜಗನ್‌ ಸುಮ್ಮನಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...