Homeಮುಖಪುಟಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ 'ವಿದ್ಯುತ್ ಒಪ್ಪಂದ' ರದ್ದತಿಗೆ ಮುಂದಾದ ಆಂಧ್ರ ಸರ್ಕಾರ...

ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

- Advertisement -
- Advertisement -

ಅದಾನಿ ಗ್ರೀನ್ ಎನರ್ಜಿ, ಅದರ ಮುಖ್ಯಸ್ಥ ಗೌತಮ್ ಅದಾನಿ ಹಾಗೂ ಮತ್ತಿರರ ವಿರುದ್ದ ಲಂಚ, ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಅದಾನಿ ಸಂಸ್ಥೆ ಜೊತೆಗಿನ ವಿದ್ಯುತ್ ಒಪ್ಪಂದ ರದ್ದುಗೊಳಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ.

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1,750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080) ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ವಿಚಾರಣೆಗೆ ಒತ್ತಾಯಿಸಿದೆ.

“ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1,750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, “ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. “ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ ಎಂದರ್ಥ” ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಆಂಧ್ರ ಪ್ರದೇಶದ ಈಗಿನ ರಾಜ್ಯ ಸರ್ಕಾರ ಹಿಂದಿನ ಆಡಳಿತದ ‘ಎಲ್ಲಾ ಆಂತರಿಕ ಫೈಲ್‌ಗಳನ್ನು ಪರಿಶೀಲನೆ ನಡೆಸುತ್ತಿದೆ. ಅದರ ಪ್ರಕಾರ, ಆಪಾದಿತ ಅವ್ಯವಹಾರ ನಡೆದಿದೆ ಎಂದು ರಾಜ್ಯ ಹಣಕಾಸು ಸಚಿವ ಪಯ್ಯಾವುಲಾ ಕೇಶವ್ ಸೋಮವಾರ ತಿಳಿಸಿದ್ದಾಗಿ ರಾಯಿಟರ್ಸ್‌ ವರದಿ ಮಾಡಿದೆ.

“ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ನಾವು ಮುಂದೆ ಏನು ಮಾಡಬಹುದು ಎಂಬುವುದನ್ನು ನಾವು ಪರಿಶೀಲಿಸುತ್ತೇವೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ” ಎಂದು ಕೇಶವ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...