Homeಮುಖಪುಟಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ 'ವಿದ್ಯುತ್ ಒಪ್ಪಂದ' ರದ್ದತಿಗೆ ಮುಂದಾದ ಆಂಧ್ರ ಸರ್ಕಾರ...

ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

- Advertisement -
- Advertisement -

ಅದಾನಿ ಗ್ರೀನ್ ಎನರ್ಜಿ, ಅದರ ಮುಖ್ಯಸ್ಥ ಗೌತಮ್ ಅದಾನಿ ಹಾಗೂ ಮತ್ತಿರರ ವಿರುದ್ದ ಲಂಚ, ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಅದಾನಿ ಸಂಸ್ಥೆ ಜೊತೆಗಿನ ವಿದ್ಯುತ್ ಒಪ್ಪಂದ ರದ್ದುಗೊಳಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ.

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1,750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080) ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ವಿಚಾರಣೆಗೆ ಒತ್ತಾಯಿಸಿದೆ.

“ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1,750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, “ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. “ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ ಎಂದರ್ಥ” ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಆಂಧ್ರ ಪ್ರದೇಶದ ಈಗಿನ ರಾಜ್ಯ ಸರ್ಕಾರ ಹಿಂದಿನ ಆಡಳಿತದ ‘ಎಲ್ಲಾ ಆಂತರಿಕ ಫೈಲ್‌ಗಳನ್ನು ಪರಿಶೀಲನೆ ನಡೆಸುತ್ತಿದೆ. ಅದರ ಪ್ರಕಾರ, ಆಪಾದಿತ ಅವ್ಯವಹಾರ ನಡೆದಿದೆ ಎಂದು ರಾಜ್ಯ ಹಣಕಾಸು ಸಚಿವ ಪಯ್ಯಾವುಲಾ ಕೇಶವ್ ಸೋಮವಾರ ತಿಳಿಸಿದ್ದಾಗಿ ರಾಯಿಟರ್ಸ್‌ ವರದಿ ಮಾಡಿದೆ.

“ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ನಾವು ಮುಂದೆ ಏನು ಮಾಡಬಹುದು ಎಂಬುವುದನ್ನು ನಾವು ಪರಿಶೀಲಿಸುತ್ತೇವೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ” ಎಂದು ಕೇಶವ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...