Homeಮುಖಪುಟಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ 'ವಿದ್ಯುತ್ ಒಪ್ಪಂದ' ರದ್ದತಿಗೆ ಮುಂದಾದ ಆಂಧ್ರ ಸರ್ಕಾರ...

ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

- Advertisement -
- Advertisement -

ಅದಾನಿ ಗ್ರೀನ್ ಎನರ್ಜಿ, ಅದರ ಮುಖ್ಯಸ್ಥ ಗೌತಮ್ ಅದಾನಿ ಹಾಗೂ ಮತ್ತಿರರ ವಿರುದ್ದ ಲಂಚ, ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಅದಾನಿ ಸಂಸ್ಥೆ ಜೊತೆಗಿನ ವಿದ್ಯುತ್ ಒಪ್ಪಂದ ರದ್ದುಗೊಳಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತಿಸುತ್ತಿದೆ ಎಂದು ವರದಿಯಾಗಿದೆ.

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1,750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080) ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ವಿಚಾರಣೆಗೆ ಒತ್ತಾಯಿಸಿದೆ.

“ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1,750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, “ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. “ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ ಎಂದರ್ಥ” ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಆಂಧ್ರ ಪ್ರದೇಶದ ಈಗಿನ ರಾಜ್ಯ ಸರ್ಕಾರ ಹಿಂದಿನ ಆಡಳಿತದ ‘ಎಲ್ಲಾ ಆಂತರಿಕ ಫೈಲ್‌ಗಳನ್ನು ಪರಿಶೀಲನೆ ನಡೆಸುತ್ತಿದೆ. ಅದರ ಪ್ರಕಾರ, ಆಪಾದಿತ ಅವ್ಯವಹಾರ ನಡೆದಿದೆ ಎಂದು ರಾಜ್ಯ ಹಣಕಾಸು ಸಚಿವ ಪಯ್ಯಾವುಲಾ ಕೇಶವ್ ಸೋಮವಾರ ತಿಳಿಸಿದ್ದಾಗಿ ರಾಯಿಟರ್ಸ್‌ ವರದಿ ಮಾಡಿದೆ.

“ಒಪ್ಪಂದವನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ನಾವು ಮುಂದೆ ಏನು ಮಾಡಬಹುದು ಎಂಬುವುದನ್ನು ನಾವು ಪರಿಶೀಲಿಸುತ್ತೇವೆ. ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ” ಎಂದು ಕೇಶವ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...