Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...