Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...