Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...