Homeಮುಖಪುಟಆಂಧ್ರಪ್ರದೇಶ| ಟ್ರಾನ್ಸ್‌ಜೆಂಡರ್‌ ಸಮುದಾಯದೊಂದಿಗೆ ಮಗನ ಸಂಪರ್ಕ; ಆತ್ಮಹತ್ಯೆಗೆ ಶರಣಾದ ಪೋಷಕರು

ಆಂಧ್ರಪ್ರದೇಶ| ಟ್ರಾನ್ಸ್‌ಜೆಂಡರ್‌ ಸಮುದಾಯದೊಂದಿಗೆ ಮಗನ ಸಂಪರ್ಕ; ಆತ್ಮಹತ್ಯೆಗೆ ಶರಣಾದ ಪೋಷಕರು

- Advertisement -
- Advertisement -

ತಮ್ಮ 24 ವರ್ಷದ ಮಗ ಟ್ರಾನ್ಸ್‌ಜೆಂಡರ್ ಸಮುದಾಯದೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಮಧ್ಯವಯಸ್ಸಿನ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.

ನಂದ್ಯಾಲ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪಿ ಶ್ರೀನಿವಾಸ್ ರೆಡ್ಡಿ ಅವರ ಪ್ರಕಾರ, 45 ವರ್ಷದ ಸುಬ್ಬಾ ರಾಯುಡು ಮತ್ತು ಅವರ 38 ವರ್ಷದ ಪತ್ನಿ ಸರಸ್ವತಿ ಅವರು ಸಾವನ್ನಪ್ಪಿದ್ದು, ಕಳೆದ ಮೂರು ವರ್ಷಗಳಿಂದ ಸ್ಥಳೀಯ ಟ್ರಾನ್ಸ್‌ಜೆಂಡರ್ ಸಮುದಾಯದೊಂದಿಗೆ ಸಂಬಂಧ ಹೊಂದಿದ್ದ ಅವರ ಮಗ ಸುನೀಲ್ ಕುಮಾರ್ ಅವರ ಸುತ್ತಲಿನ ವಿವಾದಗಳ ನಂತರ ಸಂಭವಿಸಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಕುಮಾರ್, ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದು, ತನ್ನ ಸಂಗಾತಿಯೊಂದಿಗೆ ವಾಸಿಸಲು ಪಟ್ಟು ಹಿಡಿದಿದ್ದಾನೆ. ಇದೇ ವಿಚಾರವಾಗಿ ಪೋಷಕರೊಂದಿಗೆ ಆಗಾಗ್ಗೆ ಜಗಳಕ್ಕೆ ಕಾರಣವಾಯಿತು.

ಈ ವಿಚಾರವಾಗಿ ಕುಮಾರ್ ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಪೋಷಕರ ಸಂಕಷ್ಟವನ್ನು ಹೆಚ್ಚಿಸಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರಿಗೆ ಸೇರಿದ 1.5 ಲಕ್ಷ ರೂ.ಗಳನ್ನು ಕುಮಾರ್ ಖರ್ಚು ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಅವರು ತಮ್ಮ ಪೋಷಕರಿಂದ ಮರುಪಾವತಿಗೆ ಒತ್ತಾಯಿಸಿದ್ದಾರೆ. ಈ ಹಣಕಾಸಿನ ವಿವಾದ, ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಅವರ ಪೋಷಕರಿಗೆ ಸಾರ್ವಜನಿಕ ಅವಮಾನಗಳ ಜೊತೆಗೆ, ದಂಪತಿಗಳ ಭಾವನಾತ್ಮಕ ಒತ್ತಡವನ್ನು ಉಲ್ಬಣಗೊಳಿಸಿತು. ಅಂತಿಮವಾಗಿ ಅವರು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಕುಮಾರ್ ದಂಪತಿಯ ಏಕೈಕ ಮಗುವಾಗಿದ್ದು, ಬಿಟೆಕ್ ಮುಗಿಸಿದ ನಂತರ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ; ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...