Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...