Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...