Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...