Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....