Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....