Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...