Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...