Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...