Homeಮುಖಪುಟಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನವನ್ನು ಮಾಡುತ್ತಿದ್ದಾರೆ. ಈ ಮಧ್ಯೆ ಸರತಿ ಸಾಲನ್ನು ಮೀರಿ ಮತದಾನಕ್ಕೆ ತೆರಳಿದ್ದ ಶಾಸಕರನ್ನು ಪ್ರಶ್ನಿಸಿದ ಮತದಾರನಿಗೆ ಶಾಸಕರು ಮತ್ತು ಅವರ ಬೆಂಬಲಿಗರು ಥಳಿಸಿರುವ ಘಟನೆ ನಡೆದಿದೆ. ಇದಲ್ಲದೆ ರಾಜ್ಯದಲ್ಲಿ ಹಲವೆಡೆ ಹಿಂಸಾತ್ಮಕ ಘಟನೆಗಳು ವರದಿಯಾಗಿದೆ.

ವೈಎಸ್ಆರ್‌ಸಿಪಿ ತೆನಾಲಿ ಕ್ಷೇತ್ರದ ಶಾಸಕ ಅನ್ನಾಬತ್ತಿನ ಶಿವಕುಮಾರ್ ತೆನಾಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರನೋರ್ವನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಶಾಸಕರು ಮತದಾರನಿಗೆ ಕಪಾಳಮೋಕ್ಷ ಮಾಡುವುದು ಮತ್ತು ಇದಕ್ಕೆ ಪ್ರತಿಯಾಗಿ ಶಾಸಕರಿಗೆ ಮತದಾರ ಮರು ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ಆತನಿಗೆ ಹಿಗ್ಗಾ-ಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇನ್ನು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಮಾಚರ್ಲಾ ಕ್ಷೇತ್ರದ ರೆಂಟಾಲಾ ಮತ್ತು ಪಲಾಂಡು ಜಿಲ್ಲೆಯ ಗುರಜಾಲದಲ್ಲಿ ಉದ್ವಿಗ್ನತೆ ಉಂಟಾಗಿದೆ. ಎರಡೂ ಕಡೆಯವರು ಪರಸ್ಪರ ಕಲ್ಲುಗಳನ್ನು ತೂರಾಟ ನಡೆಸಿದ್ದಾರೆ, ದೊಣ್ಣೆಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು ಪಲ್ನಾಡು ರೆಂಟಾಲ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಸುಗಮವಾಗಿ ಚುನಾವಣೆ ನಡೆಸುವಂತೆ ಸಿಇಒಗೆ ಸೂಚಿಸಿದೆ.

ಇನ್ನು ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮತಗಟ್ಟೆಗೆ ನುಗ್ಗಿ ಇವಿಎಂಗಳನ್ನು ಹಾನಿಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ದರ್ಸಿ ವಿಧಾನಸಭಾ ಕ್ಷೇತ್ರದ ಬೊಟ್ಲಪಾಲೆಂ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಇವಿಎಂಗಳು ಹಾನಿಗೊಂಡಿದೆ, ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಚುನಾವಣಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಮತ್ತೆ ಮತದಾನಕ್ಕೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪ್ರಕ್ಷಂ ಜಿಲ್ಲಾ ಚುನಾವಣಾಧಿಕಾರಿ ಎಎಸ್ ದಿನೇಶ್ ಕುಮಾರ್ ಆದೇಶಿಸಿದ್ದಾರೆ. ಸ್ಥಳದಲ್ಲಿ  ಹೆಚ್ಚಿನ ತೊಂದರೆಯಾಗದಂತೆ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಚಿತ್ತೂರು ಜಿಲ್ಲೆಯ ಕಾರ್ವೇಟಿನಗರದ ಅಣ್ಣೂರು ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ಟಿಡಿಪಿ ಶಾಸಕ ಥಾಮಸ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಅಮದಲವಲಸ ವಿಧಾನಸಭಾ ಕ್ಷೇತ್ರದ ಪೊಂದೂರು ಮಂಡಲದ ಗೋಕರ್ಣಪಲ್ಲಿಯಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ವೈಎಸ್‌ಆರ್‌ಸಿ ಅಭ್ಯರ್ಥಿ ತಮಿನೇನಿ ಸೀತಾರಾಂ ಅವರ ಪತ್ನಿ ತಮಿನೇನಿ ವಾಣಿ ಅವರು ಜನರಲ್ ಏಜೆಂಟ್ ಆಗಿ ಮತಗಟ್ಟೆಗೆ ಪ್ರವೇಶಿಸಿದ್ದು, ಟಿಡಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಮತ್ತೊಂದೆಡೆ, ಪುಂಗನೂರು ವಿಧಾನಸಭಾ ಕ್ಷೇತ್ರದ ಸದ್ದುಂ ಮಂಡಲದ ಬೋರಕಮಂಡ ಗ್ರಾಮದಲ್ಲಿ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟ್‌ಗಳನ್ನು ವೈಎಸ್‌ಆರ್‌ಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕೂಡಲೇ ಪೊಲೀಸರು ಅವರನ್ನು ಪಿಲೇರುವಿನಲ್ಲಿ ಪತ್ತೆ ಹಚ್ಚಿ ಬೋರಕಮಂಡಕ್ಕೆ ಕರೆತಂದಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿರುವ ಇನ್ನೂ 17 ಭಾರತದ ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...