Homeಮುಖಪುಟಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನವನ್ನು ಮಾಡುತ್ತಿದ್ದಾರೆ. ಈ ಮಧ್ಯೆ ಸರತಿ ಸಾಲನ್ನು ಮೀರಿ ಮತದಾನಕ್ಕೆ ತೆರಳಿದ್ದ ಶಾಸಕರನ್ನು ಪ್ರಶ್ನಿಸಿದ ಮತದಾರನಿಗೆ ಶಾಸಕರು ಮತ್ತು ಅವರ ಬೆಂಬಲಿಗರು ಥಳಿಸಿರುವ ಘಟನೆ ನಡೆದಿದೆ. ಇದಲ್ಲದೆ ರಾಜ್ಯದಲ್ಲಿ ಹಲವೆಡೆ ಹಿಂಸಾತ್ಮಕ ಘಟನೆಗಳು ವರದಿಯಾಗಿದೆ.

ವೈಎಸ್ಆರ್‌ಸಿಪಿ ತೆನಾಲಿ ಕ್ಷೇತ್ರದ ಶಾಸಕ ಅನ್ನಾಬತ್ತಿನ ಶಿವಕುಮಾರ್ ತೆನಾಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರನೋರ್ವನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಶಾಸಕರು ಮತದಾರನಿಗೆ ಕಪಾಳಮೋಕ್ಷ ಮಾಡುವುದು ಮತ್ತು ಇದಕ್ಕೆ ಪ್ರತಿಯಾಗಿ ಶಾಸಕರಿಗೆ ಮತದಾರ ಮರು ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ಆತನಿಗೆ ಹಿಗ್ಗಾ-ಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇನ್ನು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಮಾಚರ್ಲಾ ಕ್ಷೇತ್ರದ ರೆಂಟಾಲಾ ಮತ್ತು ಪಲಾಂಡು ಜಿಲ್ಲೆಯ ಗುರಜಾಲದಲ್ಲಿ ಉದ್ವಿಗ್ನತೆ ಉಂಟಾಗಿದೆ. ಎರಡೂ ಕಡೆಯವರು ಪರಸ್ಪರ ಕಲ್ಲುಗಳನ್ನು ತೂರಾಟ ನಡೆಸಿದ್ದಾರೆ, ದೊಣ್ಣೆಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು ಪಲ್ನಾಡು ರೆಂಟಾಲ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಸುಗಮವಾಗಿ ಚುನಾವಣೆ ನಡೆಸುವಂತೆ ಸಿಇಒಗೆ ಸೂಚಿಸಿದೆ.

ಇನ್ನು ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮತಗಟ್ಟೆಗೆ ನುಗ್ಗಿ ಇವಿಎಂಗಳನ್ನು ಹಾನಿಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ದರ್ಸಿ ವಿಧಾನಸಭಾ ಕ್ಷೇತ್ರದ ಬೊಟ್ಲಪಾಲೆಂ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಇವಿಎಂಗಳು ಹಾನಿಗೊಂಡಿದೆ, ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಚುನಾವಣಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಮತ್ತೆ ಮತದಾನಕ್ಕೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪ್ರಕ್ಷಂ ಜಿಲ್ಲಾ ಚುನಾವಣಾಧಿಕಾರಿ ಎಎಸ್ ದಿನೇಶ್ ಕುಮಾರ್ ಆದೇಶಿಸಿದ್ದಾರೆ. ಸ್ಥಳದಲ್ಲಿ  ಹೆಚ್ಚಿನ ತೊಂದರೆಯಾಗದಂತೆ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಚಿತ್ತೂರು ಜಿಲ್ಲೆಯ ಕಾರ್ವೇಟಿನಗರದ ಅಣ್ಣೂರು ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ಟಿಡಿಪಿ ಶಾಸಕ ಥಾಮಸ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಅಮದಲವಲಸ ವಿಧಾನಸಭಾ ಕ್ಷೇತ್ರದ ಪೊಂದೂರು ಮಂಡಲದ ಗೋಕರ್ಣಪಲ್ಲಿಯಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ವೈಎಸ್‌ಆರ್‌ಸಿ ಅಭ್ಯರ್ಥಿ ತಮಿನೇನಿ ಸೀತಾರಾಂ ಅವರ ಪತ್ನಿ ತಮಿನೇನಿ ವಾಣಿ ಅವರು ಜನರಲ್ ಏಜೆಂಟ್ ಆಗಿ ಮತಗಟ್ಟೆಗೆ ಪ್ರವೇಶಿಸಿದ್ದು, ಟಿಡಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಮತ್ತೊಂದೆಡೆ, ಪುಂಗನೂರು ವಿಧಾನಸಭಾ ಕ್ಷೇತ್ರದ ಸದ್ದುಂ ಮಂಡಲದ ಬೋರಕಮಂಡ ಗ್ರಾಮದಲ್ಲಿ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟ್‌ಗಳನ್ನು ವೈಎಸ್‌ಆರ್‌ಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕೂಡಲೇ ಪೊಲೀಸರು ಅವರನ್ನು ಪಿಲೇರುವಿನಲ್ಲಿ ಪತ್ತೆ ಹಚ್ಚಿ ಬೋರಕಮಂಡಕ್ಕೆ ಕರೆತಂದಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...