Homeಮುಖಪುಟಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನವನ್ನು ಮಾಡುತ್ತಿದ್ದಾರೆ. ಈ ಮಧ್ಯೆ ಸರತಿ ಸಾಲನ್ನು ಮೀರಿ ಮತದಾನಕ್ಕೆ ತೆರಳಿದ್ದ ಶಾಸಕರನ್ನು ಪ್ರಶ್ನಿಸಿದ ಮತದಾರನಿಗೆ ಶಾಸಕರು ಮತ್ತು ಅವರ ಬೆಂಬಲಿಗರು ಥಳಿಸಿರುವ ಘಟನೆ ನಡೆದಿದೆ. ಇದಲ್ಲದೆ ರಾಜ್ಯದಲ್ಲಿ ಹಲವೆಡೆ ಹಿಂಸಾತ್ಮಕ ಘಟನೆಗಳು ವರದಿಯಾಗಿದೆ.

ವೈಎಸ್ಆರ್‌ಸಿಪಿ ತೆನಾಲಿ ಕ್ಷೇತ್ರದ ಶಾಸಕ ಅನ್ನಾಬತ್ತಿನ ಶಿವಕುಮಾರ್ ತೆನಾಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರನೋರ್ವನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಶಾಸಕರು ಮತದಾರನಿಗೆ ಕಪಾಳಮೋಕ್ಷ ಮಾಡುವುದು ಮತ್ತು ಇದಕ್ಕೆ ಪ್ರತಿಯಾಗಿ ಶಾಸಕರಿಗೆ ಮತದಾರ ಮರು ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ಆತನಿಗೆ ಹಿಗ್ಗಾ-ಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇನ್ನು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಮಾಚರ್ಲಾ ಕ್ಷೇತ್ರದ ರೆಂಟಾಲಾ ಮತ್ತು ಪಲಾಂಡು ಜಿಲ್ಲೆಯ ಗುರಜಾಲದಲ್ಲಿ ಉದ್ವಿಗ್ನತೆ ಉಂಟಾಗಿದೆ. ಎರಡೂ ಕಡೆಯವರು ಪರಸ್ಪರ ಕಲ್ಲುಗಳನ್ನು ತೂರಾಟ ನಡೆಸಿದ್ದಾರೆ, ದೊಣ್ಣೆಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು ಪಲ್ನಾಡು ರೆಂಟಾಲ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಸುಗಮವಾಗಿ ಚುನಾವಣೆ ನಡೆಸುವಂತೆ ಸಿಇಒಗೆ ಸೂಚಿಸಿದೆ.

ಇನ್ನು ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮತಗಟ್ಟೆಗೆ ನುಗ್ಗಿ ಇವಿಎಂಗಳನ್ನು ಹಾನಿಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ದರ್ಸಿ ವಿಧಾನಸಭಾ ಕ್ಷೇತ್ರದ ಬೊಟ್ಲಪಾಲೆಂ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಇವಿಎಂಗಳು ಹಾನಿಗೊಂಡಿದೆ, ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಚುನಾವಣಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಮತ್ತೆ ಮತದಾನಕ್ಕೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪ್ರಕ್ಷಂ ಜಿಲ್ಲಾ ಚುನಾವಣಾಧಿಕಾರಿ ಎಎಸ್ ದಿನೇಶ್ ಕುಮಾರ್ ಆದೇಶಿಸಿದ್ದಾರೆ. ಸ್ಥಳದಲ್ಲಿ  ಹೆಚ್ಚಿನ ತೊಂದರೆಯಾಗದಂತೆ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಚಿತ್ತೂರು ಜಿಲ್ಲೆಯ ಕಾರ್ವೇಟಿನಗರದ ಅಣ್ಣೂರು ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ಟಿಡಿಪಿ ಶಾಸಕ ಥಾಮಸ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಅಮದಲವಲಸ ವಿಧಾನಸಭಾ ಕ್ಷೇತ್ರದ ಪೊಂದೂರು ಮಂಡಲದ ಗೋಕರ್ಣಪಲ್ಲಿಯಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ವೈಎಸ್‌ಆರ್‌ಸಿ ಅಭ್ಯರ್ಥಿ ತಮಿನೇನಿ ಸೀತಾರಾಂ ಅವರ ಪತ್ನಿ ತಮಿನೇನಿ ವಾಣಿ ಅವರು ಜನರಲ್ ಏಜೆಂಟ್ ಆಗಿ ಮತಗಟ್ಟೆಗೆ ಪ್ರವೇಶಿಸಿದ್ದು, ಟಿಡಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಮತ್ತೊಂದೆಡೆ, ಪುಂಗನೂರು ವಿಧಾನಸಭಾ ಕ್ಷೇತ್ರದ ಸದ್ದುಂ ಮಂಡಲದ ಬೋರಕಮಂಡ ಗ್ರಾಮದಲ್ಲಿ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟ್‌ಗಳನ್ನು ವೈಎಸ್‌ಆರ್‌ಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕೂಡಲೇ ಪೊಲೀಸರು ಅವರನ್ನು ಪಿಲೇರುವಿನಲ್ಲಿ ಪತ್ತೆ ಹಚ್ಚಿ ಬೋರಕಮಂಡಕ್ಕೆ ಕರೆತಂದಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...