Homeಮುಖಪುಟಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

ಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

- Advertisement -
ಆಂಧ್ರಪ್ರದೇಶದಲ್ಲಿ 2023ರ ಅಕ್ಟೋಬರ್ 29ರಂದು 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳ ಅಪಘಾತಕ್ಕೆ ಇದೀಗ ಕಾರಣ ಬಯಲಾಗಿದ್ದು, ಪ್ಯಾಸೆಂಜರ್ ರೈಲುವೊಂದರ ಲೊಕೊ ಪೈಲಟ್ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಯನ್ನು ನೀಡಿದ್ದು, “ಇತ್ತೀಚೆಗೆ ಸಂಭವಿಸಿದ ಆಂಧ್ರ ರೈಲು ದುರಂತದಲ್ಲಿ ಲೊಕೊ ಪೈಲಟ್ ಮತ್ತು ಸಹ ಪೈಲಟ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು. ಇಂಥ ಪ್ರಕರಣಗಳನ್ನು ಪತ್ತೆ ಮಾಡುವ ವ್ಯವಸ್ಥೆಯನ್ನು ನಾವು ಇದೀಗ ಅಳವಡಿಸುತ್ತಿದ್ದೇವೆ. ಈ ಮೂಲಕ ಲೋಕೊ ಪೈಲಟ್ ಹಾಗೂ ಸಹ ಪೈಲಟ್‍ಗಳು ರೈಲು ಚಲನೆ ಬಗ್ಗೆ ಗಮನ ಹರಿಸುವಂತೆ ಮಾಡುತ್ತಿದ್ದೇವೆ ಎಂದು  ಭಾರತೀಯ ರೈಲ್ವೇಯ ಹೊಸ ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವಾಗ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ಮಾರ್ಗದಲ್ಲಿ 2023ರ ಅಕ್ಟೋಬರ್ 29ರಂದು ಸಂಜೆ 7 ಗಂಟೆಗೆ ರಾಯಗಢ ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ ಪಲಾಸ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.

ನಾವು ಸುರಕ್ಷತೆಯತ್ತ ಗಮನ ಹರಿಸುವುದನ್ನು ಮುಂದುವರಿಸುತ್ತೇವೆ. ಪ್ರತಿ ಘಟನೆಯ ಮೂಲ ಕಾರಣವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತೇವೆ ಮತ್ತು ಅದು ಪುನರಾವರ್ತನೆಯಾಗದಂತೆ ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರಿಂದ ಚಾಲಕ ಮತ್ತು ಸಹಾಯಕ ಚಾಲಕ ರೈಲಿನ ಚಲನೆಯ ಬಗ್ಗೆ ನಿಗಾವಹಿಸುತ್ತಿದ್ದಾರಾ ಎಂಬುದನ್ನು ತಿಳಿಯಲು ಸಾಧ್ಯವಿದೆ ಎಂದರು.

ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ನಡೆಸಿದ ತನಿಖಾ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಬೇಕಾಗಿದ್ದರೂ, ಅಪಘಾತದ ಒಂದು ದಿನದ ನಂತರ ಪ್ರಾಥಮಿಕ ರೈಲ್ವೇ ತನಿಖೆಯು ಡಿಕ್ಕಿಗೆ ರಾಯಗಡ ಪ್ಯಾಸೆಂಜರ್ ರೈಲಿನ ಚಾಲಕ ಮತ್ತು ಸಹಾಯಕ ಚಾಲಕನನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಸಿಬ್ಬಂದಿಗಳು ಕೂಡ ಸಾವನ್ನಪ್ಪಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ಮೊದಲು ಹೇಳಿದ್ದರು. ಇದೀಗ ಭೀಕರ ರೈಲು ದುರಂತಕ್ಕೆ ಕಾರಣ ಬಯಲಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...