Homeಮುಖಪುಟಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

ಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

- Advertisement -
ಆಂಧ್ರಪ್ರದೇಶದಲ್ಲಿ 2023ರ ಅಕ್ಟೋಬರ್ 29ರಂದು 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳ ಅಪಘಾತಕ್ಕೆ ಇದೀಗ ಕಾರಣ ಬಯಲಾಗಿದ್ದು, ಪ್ಯಾಸೆಂಜರ್ ರೈಲುವೊಂದರ ಲೊಕೊ ಪೈಲಟ್ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಯನ್ನು ನೀಡಿದ್ದು, “ಇತ್ತೀಚೆಗೆ ಸಂಭವಿಸಿದ ಆಂಧ್ರ ರೈಲು ದುರಂತದಲ್ಲಿ ಲೊಕೊ ಪೈಲಟ್ ಮತ್ತು ಸಹ ಪೈಲಟ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು. ಇಂಥ ಪ್ರಕರಣಗಳನ್ನು ಪತ್ತೆ ಮಾಡುವ ವ್ಯವಸ್ಥೆಯನ್ನು ನಾವು ಇದೀಗ ಅಳವಡಿಸುತ್ತಿದ್ದೇವೆ. ಈ ಮೂಲಕ ಲೋಕೊ ಪೈಲಟ್ ಹಾಗೂ ಸಹ ಪೈಲಟ್‍ಗಳು ರೈಲು ಚಲನೆ ಬಗ್ಗೆ ಗಮನ ಹರಿಸುವಂತೆ ಮಾಡುತ್ತಿದ್ದೇವೆ ಎಂದು  ಭಾರತೀಯ ರೈಲ್ವೇಯ ಹೊಸ ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವಾಗ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ಮಾರ್ಗದಲ್ಲಿ 2023ರ ಅಕ್ಟೋಬರ್ 29ರಂದು ಸಂಜೆ 7 ಗಂಟೆಗೆ ರಾಯಗಢ ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ ಪಲಾಸ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.

ನಾವು ಸುರಕ್ಷತೆಯತ್ತ ಗಮನ ಹರಿಸುವುದನ್ನು ಮುಂದುವರಿಸುತ್ತೇವೆ. ಪ್ರತಿ ಘಟನೆಯ ಮೂಲ ಕಾರಣವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತೇವೆ ಮತ್ತು ಅದು ಪುನರಾವರ್ತನೆಯಾಗದಂತೆ ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರಿಂದ ಚಾಲಕ ಮತ್ತು ಸಹಾಯಕ ಚಾಲಕ ರೈಲಿನ ಚಲನೆಯ ಬಗ್ಗೆ ನಿಗಾವಹಿಸುತ್ತಿದ್ದಾರಾ ಎಂಬುದನ್ನು ತಿಳಿಯಲು ಸಾಧ್ಯವಿದೆ ಎಂದರು.

ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ನಡೆಸಿದ ತನಿಖಾ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಬೇಕಾಗಿದ್ದರೂ, ಅಪಘಾತದ ಒಂದು ದಿನದ ನಂತರ ಪ್ರಾಥಮಿಕ ರೈಲ್ವೇ ತನಿಖೆಯು ಡಿಕ್ಕಿಗೆ ರಾಯಗಡ ಪ್ಯಾಸೆಂಜರ್ ರೈಲಿನ ಚಾಲಕ ಮತ್ತು ಸಹಾಯಕ ಚಾಲಕನನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಸಿಬ್ಬಂದಿಗಳು ಕೂಡ ಸಾವನ್ನಪ್ಪಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ಮೊದಲು ಹೇಳಿದ್ದರು. ಇದೀಗ ಭೀಕರ ರೈಲು ದುರಂತಕ್ಕೆ ಕಾರಣ ಬಯಲಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...